twitter
    For Quick Alerts
    ALLOW NOTIFICATIONS  
    For Daily Alerts

    ಕನ್ನಡಕ್ಕೆ ರೀಮೇಕ್ ಆಗಲಿದೆ ಮಲಯಾಳಂ ನೈವೇದ್ಯಂ

    By Rajendra
    |

    ಪ್ರಶಸ್ತಿ ಪುರಸ್ಕೃತ ನಿರ್ದೇಶಕ ದಿವಂಗತ ಎ ಕೆ ಲೋಹಿತ್ ದಾಸ್ ಅವರ ಮಳೆಯಾಳಂ ಚಿತ್ರ ನೈವೇದ್ಯಂ ಕನ್ನಡಕ್ಕೆ ರೀಮೇಕ್ ಆಗುತ್ತಿದೆ. ಚಿತ್ರ ನಿರ್ಮಾಪಕ ಒಮರ್ ಶರೀಫ್ ಈ ವಿಷಯವನ್ನು ಪ್ರಕಟಿಸಿದ್ದು ಈ ಯಶಸ್ವಿ ಚಿತ್ರವನ್ನು ಕನ್ನಡಕ್ಕೆ ತರುತ್ತಿರುವುದಾಗಿ ತಿಳಿಸಿದ್ದಾರೆ.

    ಚಿತ್ರದ ನಾಯಕನ ಪಾತ್ರಕ್ಕೆ ವಿಜಯ ರಾಘವೇಂದ್ರ ಅವರನ್ನು ಆಯ್ಕೆ ಮಾಡಲು ಚಿಂತನೆ ನಡೆದಿದೆ. ಮೂಲ ಚಿತ್ರದಲ್ಲಿ ವಿನೂ ಮೋಹನ್ ಪೋಷಿಸಿದ್ದ ಪಾತ್ರ ಅದಾಗಿತ್ತು. ನಾಯಕಿಯ ಆಯ್ಕೆ ಪ್ರಗತಿಯಲ್ಲಿದ್ದು ಹೊಸ ಮುಖಕ್ಕಾಗಿ ಹುಡುಕಾಟ ನಡೆದಿದೆ.

    ಕನ್ನಡದಲ್ಲೂ ಇದೇ ಶೀರ್ಷಿಕೆಯನ್ನು ಉಳಿಸಿಕೊಂಡು ಮೂಲ ಕಥೆಗೆ ಧಕ್ಕೆಯಾಗದಂತೆ ಯಥಾವತ್ತಾಗಿ ಕನ್ನಡಕ್ಕೆ ತರಲಾಗುತ್ತದೆ ಎನ್ನುತ್ತವೆ ಮೂಲಗಳು. ಸಂಭಾಷಣೆಯ ಜವಾಬ್ದಾರಿಯನ್ನು ಬಿ ಎ ಮಧು ಅವರಿಗೆ ಒಪ್ಪಿಸಲಾಗಿದೆ. ಈ ಚಿತ್ರದಲ್ಲಿ ಹಾಡುಗಳೆ ಜೀವಾಳ. ಜಯಚಂದ್ರನ್ ಸಂಗೀತ ಸಂಯೋಜಿಸಿದ್ದ ಟ್ಯೂನ್ ಗಳನ್ನು ಯಥಾವತ್ತಾಗಿ ಬಳಸಿಕೊಳ್ಳುತ್ತಿದ್ದಾರೆ. ನವೆಂಬರ್ ತಿಂಗಳಲ್ಲಿ ಮೈಸೂರಿನಲ್ಲಿ ಚಿತ್ರ ಸೆಟ್ಟೇರಲಿದೆ.

    Thursday, August 19, 2010, 18:02
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X