Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡದ 32 ಹೆಸರಾಂತ ನಿರ್ದೇಶಕರೊಂದಿಗೆ ಒಮ್ಮೊಮ್ಮೆ
ಗೋಲ್ಡನ್ ಐ ಪಿಕ್ಚರ್ಸ್ ಸಂಸ್ಥೆ ನಿರ್ಮಿಸುತ್ತಿರುವ 'ಒಮ್ಮೊಮ್ಮೆ' ಚಿತ್ರದ ಹಾಡುಗಳ ಧ್ವನಿಮುದ್ರಣ ಪ್ರಸಾದ್ ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಅಕ್ಷಯ ತೃತೀಯದ ಶುಭದಿನದಂದು ಆರಂಭವಾಗಿದೆ. ಐದು ಹಾಡುಗಳಿರುವ ಈ ಚಿತ್ರಕ್ಕೆ ಅರ್ಜುನ್ ಸಂಗೀತ ಸಂಯೋಜಿಸುತ್ತಿದ್ದಾರೆ. ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರಸಿಂಗ್ಬಾಬು ಹಾಗೂ ಉದ್ಯಮದ ಹಲವು ಗಣ್ಯರು ಅಂದಿನ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.
ಕಿರಣ್ಗೋವಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದು, ನಾಗಶೇಖರ್ ಹಾಗೂ ಶಿವರಾಜ್ ಅವರೊಂದಿಗೆ ನಿರ್ಮಾಣದಲ್ಲೂ ಭಾಗಿಯಾಗಿದ್ದಾರೆ. ವಿಭಿನ್ನ ಕಥಾ ಹಂದರವುಳ್ಳ ಈ ಚಿತ್ರದಲ್ಲಿ ನಾಗಶೇಖರ್ ನಾಯಕನಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ನನ್ನ ಪಾತ್ರ ಚಾರ್ಲ್ಚಾಪ್ಲಿನ್ ತರಹ. ಎಲ್ಲರನ್ನು ನಗಿಸಿ ತಾನು ಅಳುವ ಪಾತ್ರ ಎಂದು ನಾಗಶೇಖರ್ ತಮ್ಮ ಪಾತ್ರದ ವಿವರಣೆ ನೀಡಿದ್ದಾರೆ. ರಾಗಿಣಿ ಹಾಗೂ ಜನ್ನಿಫರ್ ಕೊತ್ವಾಲ್ ನಾಯಕಿಯರಾಗಿ ಆಯ್ಕೆಯಾಗಿದ್ದಾರೆ. ಇನ್ನೊಬ್ಬ ನಾಯಕಿಯ ಆಯ್ಕೆ ನಡೆಯುತ್ತಿದೆ.
ಎಸ್.ವಿ.ರಾಜೇಂದ್ರಸಿಂಗ್ಬಾಬು, ಜೋಸೈಮನ್, ಪ್ರೇಮ್, ದಿನಕರ್ ತೂಗುದೀಪ್, ಅರ್ಜುನ್ ಸೇರಿದಂತೆ ಕನ್ನಡ ಚಿತ್ರರಂಗದ 32 ಜನ ಹೆಸರಾಂತ ನಿರ್ದೇಶಕರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ವರಮಹಾಲಕ್ಷ್ಮೀ ಹಬ್ಬದಂದು ನಾಗಶೇಖರ್ ನಿರ್ದೇಶನದ 'ಸಂಜು ವೆಡ್ಸ್ ಗೀತಾ' ಬಿಡುಗಡೆಯಾಗುತ್ತಿದೆ. ಅದೇ ದಿನ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಸತ್ಯ ಹೆಗ್ಡೆ ಛಾಯಾಗ್ರಹಣ, ಜೋನಿಹರ್ಷರ ಸಂಕಲನ ಈ ನೂತನ ಚಿತ್ರಕ್ಕಿದೆ.