Don't Miss!
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೈಸೂರಿನಲ್ಲಿದೆ ಸೂಪರ್ ಪೈರಸಿ ಸಿಡಿ ಜಾಲ
ಮೈಸೂರು, ಡಿ.19: ಮೈಸೂರು ನಗರದ ವಿವಿಧೆಡೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಮೈಸೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಕೋಟ್ಯಾಂತರ ರೂಪಾಯಿ ಮೌಲ್ಯದ ಪೈರಸಿ ಸಿಡಿಗಳನ್ನು ವಶಪಡಿಸಿಕೊಂಡಿದ್ದು, ಹನ್ನೆರಡು ಮಂದಿಯನ್ನು ಬಂಧಿಸಲಾಗಿದೆ. ನಕಲಿ ಸಿಡಿಗಳ ರಾಶಿಯಲ್ಲಿ ಇತ್ತೀಚಿನ ಯಶಸ್ವಿ ಚಿತ್ರಗಳಾದ ಜಾಕಿ, ಸೂಪರ್ ಕೂಡಾ ರಾರಾಜಿಸುತ್ತಾ ಬಿದ್ದಿದ್ದವು.
ಮೈಸೂರು ನಗರದಲ್ಲಿರುವ ಸಂಗಂ, ಶಾಲಿಮಾರ್, ಪ್ರಭಾ, ಒಲಂಪಿಯಾ ಹಾಗೂ ಶಾಂತಲ ಥಿಯೇಟರ್ ಸುತ್ತಮುತ್ತ ಸೇರಿದಂತೆ ಕೆಲವು ಸಿಡಿ ಸೆಂಟರ್ಗಳಿಗೆ ಪೊಲೀಸರು ಹಾಗೂ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಸೇರಿದಂತೆ ಸುಮಾರು ನೂರಕ್ಕೂ ಹೆಚ್ಚು ಮಂದಿ ದಾಳಿ ನಡಸಿ ಪೈರೆಸಿ ಸಿಡಿಗಳನ್ನು ವಶಪಡಿಸಿಕೊಂಡರು.
ಸೂಪರ್ ಸಿಡಿ ಬೇಕಾ?:ಇತ್ತೀಚೆಗೆ ಬಿಡುಗಡೆಯಾದ ಪುನೀತ್ ರಾಜ್ಕುಮಾರ್ ಅಭಿನಯದ ಜಾಕಿ ಹಾಗೂ ಉಪೇಂದ್ರ ಅಭಿನಯದ ಸೂಪರ್ ಚಿತ್ರಗಳ ಪೈರೆಸಿ ಕುರಿತು ಮಾಹಿತಿ ದೊರೆತ ಹಿನ್ನಲೆಯಲ್ಲಿ ಮೈಸೂರಿಗೆ ಆಗಮಿಸಿದ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳಾದ ಸಾ.ರಾ.ಗೋವಿಂದ್, ರಾಕ್ಲೈನ್ ವೆಂಕಟೇಶ್, ಬಣಕಾರ್, ಕರಿಸುಬ್ಬು, ಕೆ.ಮಂಜು, ಸಂದೇಶ್ ನಾಗರಾಜ್, ನಟ ದುನಿಯಾ ವಿಜಿ, ನಟಿ ತಾರಾ ಅವರುಗಳು ಡಿಸಿಪಿ ಬಸವರಾಜ್ ಮಾಲಗತ್ತಿ ಅವರೊಂದಿಗೆ ಚರ್ಚಿಸಿ ಬಳಿಕ ಪೊಲೀಸರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿದರು.
ರಸ್ತೆ ಬದಿಗಳಲ್ಲಿ ಸಿಡಿ ಮಾರಾಟ ಮಾರಾಟ ಮಾಡುತ್ತಿದ್ದ ಅಂಗಡಿಗಳಲ್ಲದೆ, ಮಂಡಿಮೊಹಲ್ಲಾದ ವಾಣಿಜ್ಯ ಸಂಕೀರ್ಣದಲ್ಲಿದ್ದ ಎರಡು ಸಿಡಿ ಸೆಂಟರ್ ಮೇಲೆ ದಾಳಿ ನಡೆಸಿ ಎರಡು ಸಾವಿರಕ್ಕೂ ಹೆಚ್ಚು ಸಿಡಿಗಳು ಹಾಗೂ ಸಿನಿಮಾ ಪೋಸ್ಟರ್ಗಳನ್ನು ವಶಪಡಿಸಿಕೊಳ್ಳಲಾಯಿತು. ಈ ಅನಿರೀಕ್ಷಿತ ದಾಳಿಯಿಂದ ಸುಮಾರು ಎರಡು ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಸಿಡಿಗಳು ದೊರೆತಿರುವುದರಿಂದ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಪೈರೆಸಿ ದಂಧೆಯನ್ನು ತಡೆಯುವಂತೆ ಚಲನಚಿತ್ರ ವಾಣಿಜ್ಯ ಮಂಡಳಿಯು ಡಿಸಿಪಿ ಬಸವರಾಜ ಮಾಲಗತ್ತಿಯವರಿಗೆ ಮನವಿ ಸಲ್ಲಿಸಿದೆ.