Don't Miss!
- Automobiles ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- News Tirupati Darshan Ticket: ತಿರುಪತಿ ದರ್ಶನಕ್ಕೆ ವಿಶೇಷ ಟಿಕೆಟ್ ಬಿಡುಗಡೆ: ಪೂಜಾ ಸೇವೆಯಲ್ಲಿ ಬಾಗವಹಿಸಲು ದಿನಾಂಕ ಆಯ್ಕೆ ಮಾಡಿ...
- Finance ಕಬ್ಬನ್ ಪಾರ್ಕ್ನಲ್ಲಿ ಮರ ಅಪ್ಪಿಕೊಳ್ಳುವ ಕಾರ್ಯಕ್ರಮಕ್ಕೆ ತಲಾ 1,500 ರೂ. ಶುಲ್ಕವಿಟ್ಟ ಕಂಪನಿ!
- Technology Itel: ಐಟೆಲ್ ಸೂಪರ್ ಗುರು 4G ಫೋನ್ ಲಾಂಚ್! ಯುಪಿಐ ಬೆಂಬಲ
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೈಸೂರಿನಲ್ಲಿದೆ ಸೂಪರ್ ಪೈರಸಿ ಸಿಡಿ ಜಾಲ
ಮೈಸೂರು, ಡಿ.19: ಮೈಸೂರು ನಗರದ ವಿವಿಧೆಡೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಮೈಸೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಕೋಟ್ಯಾಂತರ ರೂಪಾಯಿ ಮೌಲ್ಯದ ಪೈರಸಿ ಸಿಡಿಗಳನ್ನು ವಶಪಡಿಸಿಕೊಂಡಿದ್ದು, ಹನ್ನೆರಡು ಮಂದಿಯನ್ನು ಬಂಧಿಸಲಾಗಿದೆ. ನಕಲಿ ಸಿಡಿಗಳ ರಾಶಿಯಲ್ಲಿ ಇತ್ತೀಚಿನ ಯಶಸ್ವಿ ಚಿತ್ರಗಳಾದ ಜಾಕಿ, ಸೂಪರ್ ಕೂಡಾ ರಾರಾಜಿಸುತ್ತಾ ಬಿದ್ದಿದ್ದವು.
ಮೈಸೂರು ನಗರದಲ್ಲಿರುವ ಸಂಗಂ, ಶಾಲಿಮಾರ್, ಪ್ರಭಾ, ಒಲಂಪಿಯಾ ಹಾಗೂ ಶಾಂತಲ ಥಿಯೇಟರ್ ಸುತ್ತಮುತ್ತ ಸೇರಿದಂತೆ ಕೆಲವು ಸಿಡಿ ಸೆಂಟರ್ಗಳಿಗೆ ಪೊಲೀಸರು ಹಾಗೂ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಸೇರಿದಂತೆ ಸುಮಾರು ನೂರಕ್ಕೂ ಹೆಚ್ಚು ಮಂದಿ ದಾಳಿ ನಡಸಿ ಪೈರೆಸಿ ಸಿಡಿಗಳನ್ನು ವಶಪಡಿಸಿಕೊಂಡರು.
ಸೂಪರ್ ಸಿಡಿ ಬೇಕಾ?:ಇತ್ತೀಚೆಗೆ ಬಿಡುಗಡೆಯಾದ ಪುನೀತ್ ರಾಜ್ಕುಮಾರ್ ಅಭಿನಯದ ಜಾಕಿ ಹಾಗೂ ಉಪೇಂದ್ರ ಅಭಿನಯದ ಸೂಪರ್ ಚಿತ್ರಗಳ ಪೈರೆಸಿ ಕುರಿತು ಮಾಹಿತಿ ದೊರೆತ ಹಿನ್ನಲೆಯಲ್ಲಿ ಮೈಸೂರಿಗೆ ಆಗಮಿಸಿದ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳಾದ ಸಾ.ರಾ.ಗೋವಿಂದ್, ರಾಕ್ಲೈನ್ ವೆಂಕಟೇಶ್, ಬಣಕಾರ್, ಕರಿಸುಬ್ಬು, ಕೆ.ಮಂಜು, ಸಂದೇಶ್ ನಾಗರಾಜ್, ನಟ ದುನಿಯಾ ವಿಜಿ, ನಟಿ ತಾರಾ ಅವರುಗಳು ಡಿಸಿಪಿ ಬಸವರಾಜ್ ಮಾಲಗತ್ತಿ ಅವರೊಂದಿಗೆ ಚರ್ಚಿಸಿ ಬಳಿಕ ಪೊಲೀಸರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿದರು.
ರಸ್ತೆ ಬದಿಗಳಲ್ಲಿ ಸಿಡಿ ಮಾರಾಟ ಮಾರಾಟ ಮಾಡುತ್ತಿದ್ದ ಅಂಗಡಿಗಳಲ್ಲದೆ, ಮಂಡಿಮೊಹಲ್ಲಾದ ವಾಣಿಜ್ಯ ಸಂಕೀರ್ಣದಲ್ಲಿದ್ದ ಎರಡು ಸಿಡಿ ಸೆಂಟರ್ ಮೇಲೆ ದಾಳಿ ನಡೆಸಿ ಎರಡು ಸಾವಿರಕ್ಕೂ ಹೆಚ್ಚು ಸಿಡಿಗಳು ಹಾಗೂ ಸಿನಿಮಾ ಪೋಸ್ಟರ್ಗಳನ್ನು ವಶಪಡಿಸಿಕೊಳ್ಳಲಾಯಿತು. ಈ ಅನಿರೀಕ್ಷಿತ ದಾಳಿಯಿಂದ ಸುಮಾರು ಎರಡು ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಸಿಡಿಗಳು ದೊರೆತಿರುವುದರಿಂದ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಪೈರೆಸಿ ದಂಧೆಯನ್ನು ತಡೆಯುವಂತೆ ಚಲನಚಿತ್ರ ವಾಣಿಜ್ಯ ಮಂಡಳಿಯು ಡಿಸಿಪಿ ಬಸವರಾಜ ಮಾಲಗತ್ತಿಯವರಿಗೆ ಮನವಿ ಸಲ್ಲಿಸಿದೆ.