Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಾಯದಂತ ಮಳೆ'ಯೊಂದಿಗೆ ಶ್ರುತಿ ಆಗಮನ
'ಮಾಯದಂತ ಮಳೆ'ಯೊಂದಿಗೆ ನಟಿ ಶ್ರುತಿ ಮತ್ತೆ ಬೆಳ್ಳಿಪರದೆ ಹಿಂತಿರುಗಿದ್ದಾರೆ. ಬೆಂಗಳೂರು ಮಲ್ಲೇಶ್ವರಂನ ಕಾಡುಮಲ್ಲೇಶ್ವರ ಆಲಯದಲ್ಲಿ ಈ ಚಿತ್ರದ ಮುಹೂರ್ತ ನಡೆಯಿತು.ಸಹಾಯಕ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದ ವೀರೇಶ್ ಸ್ವತಂತ್ರವಾಗಿ ನಿರ್ದೇಶಿಸುತ್ತಿರುವ ಚಿತ್ರ ಇದಾಗಿದೆ.
ಕವಿತಾ ಲಂಕೇಶ್ ನಿರ್ದೇಶಿಸಿದ್ದ 'ಅವ್ವ' ಚಿತ್ರದ ಬಳಿಕ ಮಾಯದಂತ ಮಳೆ ಚಿತ್ರದ ಮೂಲಕ ಶ್ರುತಿ ಮರಳಿದ್ದಾರೆ. ಅಳುಮುಂಜಿ ಪಾತ್ರಗಳಲ್ಲಿ ಪ್ರೇಕ್ಷಕರನ್ನು ಗೋಳುಹೊಯ್ದು ಕೊಳ್ಳುತ್ತಿದ್ದ ಶ್ರುತಿ 'ಅವ್ವ' ಚಿತ್ರದಲ್ಲಿ ಪ್ರೇಕ್ಷಕರನ್ನು ನಕ್ಕು ನಲಿಸಿದ್ದರು. ನನ್ನ ವೃತ್ತಿ ಜೀವನಲ್ಲಿ ಕಾಮಿಡಿ ಪಾತ್ರಗಳಲ್ಲಿ ಅಭಿನಯಿಸಿದ್ದು ಕಮ್ಮಿ ಎಂಬ ಮಾತನ್ನು ಶ್ರುತಿ ಸಹ ಒಪ್ಪುತ್ತಾರೆ. 'ಮಾಯದಂತ ಮಳೆ' ಸಹ ಸತ್ವಭರಿತ ಪಾತ್ರಎನ್ನುತ್ತಾರೆ ಶ್ರುತಿ.
ನಿರ್ದೇಶನದ ಜೊತೆ ವೀರೇಶ್ ಕತೆ, ಚಿತ್ರಕತೆ ಮತ್ತು ಸಂಭಾಷಣೆಯನ್ನು ಬರೆದಿದ್ದಾರೆ. ಎರಡು ಹಂತಗಳಲ್ಲಿ ಚಿತ್ರೀಕರಣ ನಡೆಯಲಿದ್ದು ಬೆಂಗಳೂರು, ಚಿಕ್ಕಮಗಳೂರು ಮತ್ತು ದತ್ತ ಪೀಠದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ವೀರೇಶ್ ತಿಳಿಸಿದ್ದಾರೆ. ಚಿತ್ರಕ್ಕೆ ಬಂಡವಾಳ ಹಾಕುತ್ತಿರುವವರು ದೊಡ್ಡಬಳ್ಳಾಪುರದ ಬದ್ರಿ.
ಚಿತ್ರದ ಮುಖ್ಯಭೂಮಿಕೆಯಲ್ಲಿ ನಾಗಕಿರಣ್, ರೂಪಿಕಾ ಇದ್ದಾರೆ. ದಂಪತಿಗಳ ಪಾತ್ರದಲ್ಲಿ ಶ್ರುತಿ ಮತ್ತು ಶರತ್ ಬಾಬು ಈ ಚಿತ್ರದಲ್ಲಿ ಕಾಣಿಸಲಿದ್ದಾರೆ. ಮ್ಯೂಸಿಕ್ ಮೋಹನ್ ಅವರ ಸಂಗೀತ ಚಿತ್ರಕ್ಕಿದೆ. ಹಂಸಲೇಖ ಮತ್ತು ವಿ ಮನೋಹರ್ ಅವರ ಬಳಿ ಕೆಲಸ ಮಾಡಿದ ಅನುಭವ ಮ್ಯೂಸಿಕ್ ಮೋಹನ್ ಅವರಿಗಿದೆ.