Don't Miss!
- News Karnataka rain: ಗುಡುಗು, ಸಿಡಿಲು ಬಡಿತದಿಂದ ರಕ್ಷಣೆ ಪಡೆಯಲು ಏನೇನು ಮಾಡಬೇಕು? ಸಲಹೆಗಳು ಇಲ್ಲಿವೆ
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿಟ್ಟೆ ಮೀನಾಕ್ಷಿ ಕಾಲೇಜಿನಲ್ಲಿ ವಿಸ್ಮಯ ಪ್ರಣಯ!
ರಾಜ್ಸಾಗರ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ 'ವಿಸ್ಮಯ ಪ್ರಣಯ' ಚಿತ್ರಕ್ಕೆ ನಗರದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಕಾಲೇಜಿನಲ್ಲಿ ಕ್ಯಾಂಟೀನ್ ನಡೆಸುತ್ತಿದ ನಾಯಕ ತನ್ನ ಗೆಳೆಯರೊಂದಿಗೆ ಸಂಭಾಷಿಸುವ ಸನ್ನಿವೇಶವನ್ನು ಯಲಹಂಕದ ಬಳಿಯ ನಿಟ್ಟೆ ಮೀನಾಕ್ಷಿ ಕಾಲೇಜಿನಲ್ಲಿ ನಿರ್ದೇಶಕ ಮೋಹನ್ ಮಲ್ಲಪಳ್ಳಿ ಚಿತ್ರೀಕರಿಸಿಕೊಂಡರು. ರಾ
ಜಸಾಗರ್, ಅಪೂರ್ವ ಹಾಗೂ ಇಂದ್ರನ್ ಈ ಭಾಗದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು.ನಾಯಕನಾಗಿ ನಟಿಸುತ್ತಿರುವ ರಾಜ್ಸಾಗರ್ ಚಿತ್ರಕ್ಕೆ ಕಥೆ ಬರೆದಿರುವುದಲ್ಲದೆ, ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಮಯೂರಿ ಹಾಗೂ ಕಾವ್ಯಶ್ರೀ ಚಿತ್ರದಲ್ಲಿ ನಾಯಕಿಯರಾಗಿ ನಟಿಸಿದ್ದಾರೆ. ಹೇಮಾಚೌಧರಿ, ಇಂದ್ರನ್, ರಾಮಿರೆಡ್ಡಿ, ಅಪೂರ್ವ, ಕರಿಬಸವಯ್ಯ, ರೇಖಾದಾಸ್, ಮಿಮಿಕ್ರಿ ರಾಜ್ಗೋಪಾಲ್ ಮುಂತಾದವರು ಚಿತ್ರದ ತಾರಾಬಳಗದಲಿದ್ದಾರೆ.
ಬಹಳ ವರ್ಷಗಳ ನಂತರ ಮೋಹನ್ ಮಲ್ಲಪಳ್ಳಿ ಈ ಚಿತ್ರವನ್ನು ನಿರ್ದೇಶಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಮರಳಿ ಬಂದಿದ್ದಾರೆ. ಇವರೇ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಕೆ.ವಿಶ್ವನಾಥ್ ಸಂಗೀತ, ಮ್ಯಾಥ್ಯೂರಾಜನ್ ಛಾಯಾಗ್ರಹಣ, ಗಿರೀಶ್ಕುಮಾರ್ ಸಂಕಲನ, ಡಿಫ಼ರೆಂಟ್ ಡ್ಯಾನಿ ಸಾಹಸ ಹಾಗೂ ಬಿ.ಕೃಷ್ಣ ಅವರ ನಿರ್ಮಾಣ ನಿರ್ವಹಣೆ 'ವಿಸ್ಮಯ ಪ್ರಣಯ' ಚಿತ್ರಕ್ಕಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)