Don't Miss!
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಚ್ಡಿಕೆ ದ್ವಿಪತ್ನಿತ್ವ ಪ್ರಶ್ನಿಸಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆ
ಐಪಿಸಿ ಸೆಕ್ಷನ್ 494ರ ಪ್ರಕಾರ ಕಾನೂನುಬಾಹಿರವಾಗಿ ಎರಡನೇ ಮದುವೆಯಾಗುವುದು ಶಿಕ್ಷಾರ್ಹ ಅಪರಾಧ. ಆದರೆ ಎಚ್ ಡಿ ಕುಮಾರಸ್ವಾಮಿ ಅವರು ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಕಾನೂನುಬಾಹಿರವಾಗಿ ಇನ್ನೊಬ್ಬರನ್ನು ಮದುವೆಯಾಗಿದ್ದಾರೆ.
ಕಾನೂನುಬಾಹಿರವಾಗಿ ಎರಡು ಮದುವೆಯಾಗಿರುವ ಕುಮಾರಸ್ವಾಮಿ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಬೇಕು ಎಂದು ಅವರು ರಿಟ್ ಅರ್ಜಿಯಲ್ಲಿ ಹೈಕೋರ್ಟನ್ನು ಕೋರಿದ್ದಾರೆ. ಗುರುವಾರ(ಅ.20) ಅಥವಾ ಶುಕ್ರವಾರ (ಅ.21) ಎಚ್ಡಿಕೆ ವಿರುದ್ಧದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ಕುಮಾರಸ್ವಾಮಿ ಅವರು ಯಾರನ್ನು ಎರಡನೇ ಮದುವೆಯಾಗಿದ್ದಾರೆ, ಯಾವಾಗ ಆಗಿದ್ದಾರೆ ಎಂಬ ವಿವರಗಳನ್ನು ರಿಟ್ ಅರ್ಜಿಯಲ್ಲಿ ನೀಡಲಾಗಿದ್ದು, ವಿಚಾರಣೆ ವೇಳೆ ಆ ವಿವರಗಳು ಬಹಿರಂಗವಾಗಲಿವೆ. ಈಗಾಗಲೆ ಎಚ್ಡಿಕೆ ದಂಪತಿಗಳ ಮೇಲೆ ಜಂತಕಲ್ ಗಣಿ ಗುತ್ತಿಗೆ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ವಿಚಾರಣೆಯ ತೂಗುಗತ್ತಿ ನೆತ್ತಿ ಮೇಲೆ ತೂಗುತ್ತಿರುವುದು ಗೊತ್ತೇ ಇದೆ.
ವೈಎಸ್ವಿ ದತ್ತ ಪ್ರತಿಕ್ರಿಯೆ: ಈ ಬಗ್ಗೆ ತಕ್ಷಣಕ್ಕೆ ಪ್ರತಿಕ್ರಿಯಿಸಿರುವ ಜೆಡಿಎಸ್ ವಕ್ತಾರ ವೈಎಸ್ವಿ ದತ್ತ ಅವರು, ರಿಟ್ ಅರ್ಜಿಯನ್ನು ಯಾರು ಬೇಕಾದರೂ ಸಲ್ಲಿಸಬಹುದು. ಇದರಲ್ಲಿ ಅಂತಹ ವಿಶೇಷವೇನಿಲ್ಲ. ಆದರೆ ಕೆಲವರು ಪ್ರಚಾರಕ್ಕಾಗಿ ರಿಟ್ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ. ಇದು ಆ ತರಹದ್ದೇ. ಹೈಕೋರ್ಟ್ ವಿಚಾರಣೆಯನ್ನು ಕೈಗೆತ್ತಿಕೊಂಡರೆ ಆಗ ನಾವು ಕಾನೂನು ಹೋರಾಟ ನಡೆಸುವುದಾಗಿ ಹೇಳಿದ್ದಾರೆ. ಮುಂದೆ ಓದಿ... ನಟಿ ರಾಧಿಕಾಗೆ ಕುಮಾರಸ್ವಾಮಿ ಏನಾಗಬೇಕು?