ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ರಾಜ್‌ಗೆ ಶ್ರದ್ಧಾಂಜಲಿ

By Staff

ಬೆಂಗಳೂರು : ಡಾ.ರಾಜ್‌ ನಿಧನಕ್ಕೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಬುಧವಾರ ನುಡಿನಮನ ಹಾಗೂ ಶ್ರದ್ಧಾಂಜಲಿ ಸಲ್ಲಿಸಲಿದೆ.

ಸಂಜೆ 6.30ಕ್ಕೆ ಆರಂಭವಾಗುವ ಕಾರ್ಯಕ್ರಮದಲ್ಲಿ ಚಿತ್ರರಂಗದ ಹಿರಿ ಕಿರಿಯ ನಟ-ನಟಿಯರು, ತಂತ್ರಜ್ಞರು, ಕಾರ್ಮಿಕರು, ರಾಜ್‌ ಕುಟುಂಬ ವರ್ಗ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಅಪಾರ ಅಭಿಮಾನಿಗಳು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ರಾಜ್‌ ಒಡನಾಡಿಗಳು ತಮ್ಮ ನೆನಪಿನ ಬುತ್ತಿ ಬಿಚ್ಚಿಡುವರು. ವಿವಿಧ ಗಾಯಕರು ಡಾ.ರಾಜ್‌ರ ಚಲನಚಿತ್ರಗೀತೆಗಳು ಹಾಗೂ ಭಕ್ತಿಗೀತೆಗಳನ್ನು ಹಾಡುವರು. ಅಲ್ಲದೆ ರಾಜ್‌ ಅಭಿನಯದ ಚಿತ್ರಗಳ ಆಯ್ದ ದೃಶ್ಯಾವಳಿಗಳನ್ನು ಪ್ರದರ್ಶಿಸಲಾಗುವುದು.

ಸುಮಾರು 15 ಸಾವಿರ ಜನ ಸೇರಬಹುದೆಂದು ನಿರೀಕ್ಷಿಸಲಾಗಿದ್ದು, ಈ ಸಂಖ್ಯೆ ಎರಡು ಪಟ್ಟಾಗಬಹುದುದೆಂಬ ಸಂಶಯವೂ ವ್ಯಕ್ತವಾಗಿದೆ. ಕಾರ್ಯಕ್ರಮದಲ್ಲಿ ಶಿಸ್ತು ಕಾಪಾಡಲು ಸುಮಾರು ಐದು ಸಾವಿರ ಪೊಲೀಸರನ್ನು ನೇಮಿಸಲಾಗಿದೆ.

(ದಟ್ಸ್‌ ಕನ್ನಡ ವಾರ್ತೆ)

Post your views

ಮುಖಪುಟ / ಸ್ಯಾಂಡಲ್‌ವುಡ್‌

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X