twitter
    For Quick Alerts
    ALLOW NOTIFICATIONS  
    For Daily Alerts

    ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ರಾಜ್‌ಗೆ ಶ್ರದ್ಧಾಂಜಲಿ

    By Staff
    |

    ಬೆಂಗಳೂರು : ಡಾ.ರಾಜ್‌ ನಿಧನಕ್ಕೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಬುಧವಾರ ನುಡಿನಮನ ಹಾಗೂ ಶ್ರದ್ಧಾಂಜಲಿ ಸಲ್ಲಿಸಲಿದೆ.

    ಸಂಜೆ 6.30ಕ್ಕೆ ಆರಂಭವಾಗುವ ಕಾರ್ಯಕ್ರಮದಲ್ಲಿ ಚಿತ್ರರಂಗದ ಹಿರಿ ಕಿರಿಯ ನಟ-ನಟಿಯರು, ತಂತ್ರಜ್ಞರು, ಕಾರ್ಮಿಕರು, ರಾಜ್‌ ಕುಟುಂಬ ವರ್ಗ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಅಪಾರ ಅಭಿಮಾನಿಗಳು ಭಾಗವಹಿಸಲಿದ್ದಾರೆ.

    ಈ ಸಂದರ್ಭದಲ್ಲಿ ರಾಜ್‌ ಒಡನಾಡಿಗಳು ತಮ್ಮ ನೆನಪಿನ ಬುತ್ತಿ ಬಿಚ್ಚಿಡುವರು. ವಿವಿಧ ಗಾಯಕರು ಡಾ.ರಾಜ್‌ರ ಚಲನಚಿತ್ರಗೀತೆಗಳು ಹಾಗೂ ಭಕ್ತಿಗೀತೆಗಳನ್ನು ಹಾಡುವರು. ಅಲ್ಲದೆ ರಾಜ್‌ ಅಭಿನಯದ ಚಿತ್ರಗಳ ಆಯ್ದ ದೃಶ್ಯಾವಳಿಗಳನ್ನು ಪ್ರದರ್ಶಿಸಲಾಗುವುದು.

    ಸುಮಾರು 15 ಸಾವಿರ ಜನ ಸೇರಬಹುದೆಂದು ನಿರೀಕ್ಷಿಸಲಾಗಿದ್ದು, ಈ ಸಂಖ್ಯೆ ಎರಡು ಪಟ್ಟಾಗಬಹುದುದೆಂಬ ಸಂಶಯವೂ ವ್ಯಕ್ತವಾಗಿದೆ. ಕಾರ್ಯಕ್ರಮದಲ್ಲಿ ಶಿಸ್ತು ಕಾಪಾಡಲು ಸುಮಾರು ಐದು ಸಾವಿರ ಪೊಲೀಸರನ್ನು ನೇಮಿಸಲಾಗಿದೆ.

    (ದಟ್ಸ್‌ ಕನ್ನಡ ವಾರ್ತೆ)

    Post your views

    ಮುಖಪುಟ / ಸ್ಯಾಂಡಲ್‌ವುಡ್‌

    Thursday, March 28, 2024, 23:10
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X