For Quick Alerts
For Daily Alerts
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎದೆನೋವಿನಿಂದ ಅಣ್ಣಾವ್ರು ಆಸ್ಪತ್ರೆಗೆ
News
oi-Staff
By Super
|
ಬೆಂಗಳೂರು : ವರನಟ ಡಾ.ರಾಜ್ಕುಮಾರ್ ಮತ್ತೆ ಅನಾರೋಗ್ಯಕ್ಕೆ ತುತ್ತಾಗಿದ್ದು , ಎದೆನೋವಿನ ಕಾರಣ ವೊಕ್ಹಾರ್ಟ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎದೆನೋವು ಅನುಭವಿಸಿದ ರಾಜ್ರನ್ನು ಭಾನುವಾರ (ಜು.18) ವೊಕ್ಹಾರ್ಟ್ ಆಸ್ಪತ್ರೆ ಮತ್ತು ಹೃದಯ ಸಂಸ್ಥೆಗೆ ದಾಖಲಿಸಲಾಗಿದೆ. ರಾಜ್ ಅವರ ಹೃದಯ ತಪಾಸಣೆ ನಡೆಸಲಾಗಿದ್ದು , ಅವರ ಪರಿಸ್ಥಿತಿ ಉತ್ತಮವಾಗಿದೆ. ಆತಂಕಕ್ಕೆ ಕಾರಣವಿಲ್ಲ ಎಂದು ಸಂಸ್ಥೆಯ ಉಪಾಧ್ಯಕ್ಷ ವಿಶಾಲ್ ಬಾಲಿ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.
ಇನ್ನೂ ಎರಡು ಮೂರು ದಿನಗಳ ಕಾಲ ರಾಜ್ ಅವರ ದೇಹಸ್ಥಿತಿ ಗಮನಿಸಲಾಗುವುದು. ಹೃದಯತಜ್ಞ ಡಾ.ರಂಗನಾಥ ನಾಯಕ್ ಹಾಗೂ ರಾಜ್ರ ಖಾಸಗಿ ವೈದ್ಯ ಡಾ.ರಮಣ ರಾವ್ ಚಿಕಿತ್ಸೆಯ ಉಸ್ತುವಾರಿ ವಹಿಸಿದ್ದಾರೆ.
ವರನಟ ರಾಜ್ಕುಮಾರ್ ಇತ್ತೀಚೆಗಷ್ಟೇ ಮಂಡಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಹಾಸ್ಮಟ್ ಕೀಲು ಮತ್ತು ಮೂಳೆ ಆಸ್ಪತ್ರೆಗೆ ಜರುಗಿದ್ದ ಶಸ್ತ್ರಚಿಕಿತ್ಸೆಯಲ್ಲಿ ಮಂಡಿಯಲ್ಲಿ ಅಳವಡಿಸಲಾಗಿದ್ದ ಕೆಲವು ತಂತಿಗಳನ್ನು ಸಡಿಲಗೊಂಡ ಕಾರಣ ತೆಗೆದುಹಾಕಲಾಗಿತ್ತು .
(ಪಿಟಿಐ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada film icon Dr. Rajkumar hospitalised after chest pain