Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಗಸ್ಟ್ 27 ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ
ಬೆಂಗಳೂರು : ನೂರಾರು ಭಾವಪೂರ್ಣ ಗೀತೆಗಳ ಮೂಲಕ ಕನ್ನಡ ಚಿತ್ರ ರಸಿಕರ ಮನಗೆದ್ದಿರುವ ಹಿರಿಯ ಗಾಯಕಿ ಎಸ್.ಜಾನಕಿ ಅವರು 'ಸಂಗೀತ ಗಂಗಾ" ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸಂಗೀತ ಲೋಕಕ್ಕೆ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ 'ಸಂಗೀತ ಗಂಗಾ" ಪ್ರಶಸ್ತಿಯನ್ನು ನೀಡುವ ಮೂಲಕ ಗೌರವಿಸುವುದನ್ನು ನಗರದ ಸಂಗೀತಗಂಗಾ ಗಾಯನ ಸಂಸ್ಥೆ ತನ್ನ ಸಂಪ್ರದಾಯವಾಗಿಸಿಕೊಂಡಿದ್ದು, ಈ ಬಾರಿಯ ಪ್ರಶಸ್ತಿಯನ್ನು ಜಾನಕಿ ಅವರಿಗೆ ನೀಡಿದೆ. ಸಂಗೀತಗಂಗಾ ದಿವಂಗತ ಜಿ.ವಿ.ಅತ್ರಿ ಅವರ ಕನಸಿನ ಕೂಸು.
ಆಗಸ್ಟ್ 27 ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಂಗೀತಗಂಗಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಜಾನಕಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು. ಸಂಗೀತಗಂಗಾದ ಅಧ್ಯಕ್ಷೆ ಹೇಮಾ ಪ್ರಸಾದ್ ಅವರು ಸೋಮವಾರ (ಆ.19) ಈ ವಿಷಯವನ್ನು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಳೆದ 8 ವರ್ಷಗಳಿಂದಲೂ ಸಂಗೀತಗಂಗಾ ವಾರ್ಷಿಕ ಪ್ರಶಸ್ತಿಗಳನ್ನು ನೀಡುತ್ತಿದೆ. 5 ಸಾವಿರ ರುಪಾಯಿ ನಗದು ಹಾಗೂ ಸ್ಮರಣ ಫಲಕವನ್ನು ಪ್ರಶಸ್ತಿ ಹೊಂದಿದೆ. ಪಿ.ಬಿ.ಶ್ರೀನಿವಾಸ್, ಎಸ್.ಪಿ.ಬಾಲಸುಬ್ರಹ್ಮಣ್ಯಂ, ವಿಜಯಭಾಸ್ಕರ್, ಕೆ.ಎಸ್.ನರಸಿಂಹಸ್ವಾಮಿ ಸೇರಿದಂತೆ ಹಲವು ಗಣ್ಯರಿಗೆ ಸಂಗೀತಗಂಗಾ ಪ್ರಶಸ್ತಿ ಈಗಾಗಲೇ ದೊರೆತಿದೆ. ಆಗಸ್ಟ್ 27 ರ ಸಮಾರಂಭವನ್ನು ಶಾಸಕ ಪಿಜಿಆರ್ ಸಿಂಧ್ಯಾ ಉದ್ಘಾಟಿಸುವರು. ಪಿ.ಬಿ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿರುವ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸ್ಪೀಕರ್ ಬಿ.ಎಲ್.ಶಂಕರ್, ಪಂಡಿತ್ ಆರ್.ವಿ.ಶೇಷಾದ್ರಿ ಗವಾಯಿ ಸೇರಿದಂತೆ ಹಲವು ಗಣ್ಯರು ಭಾಗವಹಿಸುವರು.(ಇನ್ಫೋ ವಾರ್ತೆ)ಪೂರಕ ಓದಿಗೆ-