Don't Miss!
- Automobiles ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- Sports ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಪಾಕ್ ತಂಡದ ಮಾಜಿ ನಾಯಕಿ
- News Karnataka Lok Sabha Election 2024: ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷೇಧ!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಸ್ಪತ್ರೆಯಿಂದ ಸೀದಾ ಸೆಂಟ್ರಲ್ ಜೈಲ್ಗೆ ದರ್ಶನ್
ಕಳೆದ 11 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಚೇತರಿಸಿಕೊಂಡಿರುವ ದರ್ಶನ್ರನ್ನು ಬುಧವಾರ (ಸೆ.21) ಆಸ್ಪತ್ರೆಯಿಂದ ಬಿಡುಗಡೆ ಮಾಡಲಿದ್ದಾರೆ. ಇಲ್ಲಿಂದ ಬಿಡುಗಡೆಯಾಗಲಿರುವ ದರ್ಶನ್ರನ್ನು ಸೆಂಟ್ರಲ್ ಜೈಲಿಗೆ ಕಳುಹಿಸಲಾಗುತ್ತದೆ.
ದರ್ಶನ್ ಸಂಪೂರ್ಣ ಗುಣಮುಖರಾಗಿದ್ದು ನಾಳೆ ಅವರನ್ನು ಡಿಸ್ಚಾರ್ಚ್ ಮಾಡಲಾಗುತ್ತದೆ ಎಂದು ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ ನಿರ್ದೇಶಕ ಡಾ.ಶಶಿಧರ ಬುಗ್ಗಿ ತಿಳಿಸಿದ್ದಾರೆ. ದರ್ಶನ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದ್ದು, ಮಂಗಳವಾರ (ಸೆ.20) ರಾತ್ರಿಯಿಂದ ಅವರಿಗೆ ಔಷಧೋಪಚಾರನ್ನು ನಿಲ್ಲಿಸಲಿದ್ದೇವೆ ಎಂದು ಬುಗ್ಗಿ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದರು.
ಪತ್ನಿ ಮೇಲೆ ಹಲ್ಲೆ ಮಾಡಿದ ಪ್ರಕರಣ ಎದುರಿಸುತ್ತಿರುವ ದರ್ಶನ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದ ಮೇಲೆ ಅವರ ಆರೋಗ್ಯದಲ್ಲಿ ದಿಢೀರ್ ಎಂದು ಕೈಕೊಟ್ಟಿತ್ತು. ಕೇವಲ ಒಂದಷ್ಟು ಗಂಟೆಗಳನ್ನು ಮಾತ್ರ ಜೈಲಿನಲ್ಲಿ ಕಳೆದಿದ್ದ ದರ್ಶನ್ ಅನಾರೋಗ್ಯದ ನಿಮಿತ್ತ ಬಹುತೇಕ ಸಮಯವನ್ನು ಆಸ್ಪತ್ರೆಯಲ್ಲಿ ಕಳೆದಿದ್ದರು. (ದಟ್ಸ್ಕನ್ನಡ ಸಿನಿವಾರ್ತೆ)