Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ತಳಿರು ತೋರಣ'ಕ್ಕೆ ಖ್ಯಾತ ಛಾಯಾಗ್ರಾಹಕ ನಿಯಮ್
ಸುಧೀರ್ ಅತ್ತಾವರ್ ನಿರ್ದೇಶಿಸುತ್ತಿರುವ 'ತಳಿರು ತೋರಣ' ಚಿತ್ರಕ್ಕೆ ಅಂತಾರಾಷ್ಟ್ರೀಯ ಖ್ಯಾತಿಯ ನಿಯಮ್ ಘೋಷ್ ಛಾಯಾಗ್ರಾಹಣ ಮಾಡಲಿದ್ದಾರೆ. ಸತ್ಯಜಿತ್ ರೇ ಅವರ ಬಹುತೇಕ ಚಿತ್ರಗಳಿಗೆ ಘೋಷ್ ಸ್ಟಿಲ್ ಫೋಟೋಗ್ರಾಫರ್ ಆಗಿ ಕೆಲಸ ಮಾಡಿದ್ದರು.
ಭಾರತ ಚಲನಚಿತ್ರಜಗತ್ತು ಕಂಡ ಅಪ್ರತಿಮ ನಿರ್ದೇಶಕ ಸತ್ಯಜಿತ್ ರೇ ಅವರೊಂದಿಗೆ 25 ವರ್ಷಗಳ ಕಾಲ ದುಡಿದ ಅನುಭವಿ ಛಾಯಾಗ್ರಾಹಕ ಘೋಷ್. ಸತ್ಯಜಿತ್ ರೇ ನಿಧನರಾದ ಬಳಿಕ ಘೋಷ್ ಹತ್ತು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದರು.
ಎಂ ಎಸ್ ಸತ್ಯು ಅವರ 'ಕಹಾಂ ಕಹಾಂಸೆ ಗುಜರ್ ಗಯೇ' ಚಿತ್ರದ ಮೂಲಕ ಘೋಷ್ ಮತ್ತೆ ಚಿತ್ರರಂಗಕ್ಕೆ ಅಡಿಯಿಟ್ಟಿದ್ದರು. 'ಇಜ್ಜೋಡು" ಚಿತ್ರಕ್ಕೂ ಘೋಷ್ ಕೆಲಸ ಮಾಡಿದ್ದಾರೆ. ಇಜ್ಜೋಡಿನಲ್ಲಿ ಸುಧೀರ್ ಅತ್ತಾವರ್ ಸಹ ಕೆಲಸ ಮಾಡಿದ್ದರು ಎಂಬುದು ವಿಶೇಷ.
ಸುನಿಲ್ ಅತ್ತಾವರ್ ಅವರ ಕೆಲಸವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದ ಘೋಷ್, ಮುಂದೊಂದು ದಿನ ಅವರ ಚಿತ್ರದಲ್ಲಿ ಕೆಲಸ ಮಾಡುವ ಭರವಸೆಯನ್ನು ನೀಡಿದ್ದರಂತೆ. ಇದೀಗ 'ತಳಿರು ತೋರಣ' ದ ಮೂಲಕ ನಿಯಮ್ ಘೋಷ್, ಅತ್ತಾವರ ಅವರ ಆಸೆಯನ್ನು ಈಡೇರಿಸಿದ್ದಾರೆ. 'ತಳಿರು ತೋರಣ' ಚಿತ್ರದ ನಾಯಕ ನಟ ಶ್ರೀನಗರ ಕಿಟ್ಟಿ.