Don't Miss!
- News Kotak Mahindra Bank: ಕೋಟಕ್ ಮಹಿಂದ್ರಾ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ: ಗ್ರಾಹಕರ ಮೇಲೆ ಪರಿಣಾಮಗಳೇನು?
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ತಳಿರು ತೋರಣ'ಕ್ಕೆ ಖ್ಯಾತ ಛಾಯಾಗ್ರಾಹಕ ನಿಯಮ್
ಸುಧೀರ್ ಅತ್ತಾವರ್ ನಿರ್ದೇಶಿಸುತ್ತಿರುವ 'ತಳಿರು ತೋರಣ' ಚಿತ್ರಕ್ಕೆ ಅಂತಾರಾಷ್ಟ್ರೀಯ ಖ್ಯಾತಿಯ ನಿಯಮ್ ಘೋಷ್ ಛಾಯಾಗ್ರಾಹಣ ಮಾಡಲಿದ್ದಾರೆ. ಸತ್ಯಜಿತ್ ರೇ ಅವರ ಬಹುತೇಕ ಚಿತ್ರಗಳಿಗೆ ಘೋಷ್ ಸ್ಟಿಲ್ ಫೋಟೋಗ್ರಾಫರ್ ಆಗಿ ಕೆಲಸ ಮಾಡಿದ್ದರು.
ಭಾರತ ಚಲನಚಿತ್ರಜಗತ್ತು ಕಂಡ ಅಪ್ರತಿಮ ನಿರ್ದೇಶಕ ಸತ್ಯಜಿತ್ ರೇ ಅವರೊಂದಿಗೆ 25 ವರ್ಷಗಳ ಕಾಲ ದುಡಿದ ಅನುಭವಿ ಛಾಯಾಗ್ರಾಹಕ ಘೋಷ್. ಸತ್ಯಜಿತ್ ರೇ ನಿಧನರಾದ ಬಳಿಕ ಘೋಷ್ ಹತ್ತು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದರು.
ಎಂ ಎಸ್ ಸತ್ಯು ಅವರ 'ಕಹಾಂ ಕಹಾಂಸೆ ಗುಜರ್ ಗಯೇ' ಚಿತ್ರದ ಮೂಲಕ ಘೋಷ್ ಮತ್ತೆ ಚಿತ್ರರಂಗಕ್ಕೆ ಅಡಿಯಿಟ್ಟಿದ್ದರು. 'ಇಜ್ಜೋಡು" ಚಿತ್ರಕ್ಕೂ ಘೋಷ್ ಕೆಲಸ ಮಾಡಿದ್ದಾರೆ. ಇಜ್ಜೋಡಿನಲ್ಲಿ ಸುಧೀರ್ ಅತ್ತಾವರ್ ಸಹ ಕೆಲಸ ಮಾಡಿದ್ದರು ಎಂಬುದು ವಿಶೇಷ.
ಸುನಿಲ್ ಅತ್ತಾವರ್ ಅವರ ಕೆಲಸವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದ ಘೋಷ್, ಮುಂದೊಂದು ದಿನ ಅವರ ಚಿತ್ರದಲ್ಲಿ ಕೆಲಸ ಮಾಡುವ ಭರವಸೆಯನ್ನು ನೀಡಿದ್ದರಂತೆ. ಇದೀಗ 'ತಳಿರು ತೋರಣ' ದ ಮೂಲಕ ನಿಯಮ್ ಘೋಷ್, ಅತ್ತಾವರ ಅವರ ಆಸೆಯನ್ನು ಈಡೇರಿಸಿದ್ದಾರೆ. 'ತಳಿರು ತೋರಣ' ಚಿತ್ರದ ನಾಯಕ ನಟ ಶ್ರೀನಗರ ಕಿಟ್ಟಿ.