Just In
Don't Miss!
- News
ಸ್ಪೀಕರ್ ಕಾಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ನ ಚಂದ್ರಶೇಖರ್ ಮಾದರಿ ಕೆಲಸ!
- Sports
ಐಪಿಎಲ್ 2021: ಸಿಎಸ್ಕೆ ಉಳಿಸಿಕೊಂಡಿರುವ, ಕೈ ಬಿಟ್ಟಿರುವ ಆಟಗಾರರ ಪಟ್ಟಿ
- Automobiles
ಒಂದು ಗಂಟೆಯಲ್ಲಿ ಈ ಬುಲೆಟ್ ಥಾಲಿಯನ್ನು ತಿಂದು ಮುಗಿಸುವವರಿಗೆ ಸಿಗಲಿದೆ ಬುಲೆಟ್ ಬೈಕ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 20ರ ಚಿನ್ನ, ಬೆಳ್ಳಿ ದರ
- Lifestyle
ಕೋವಿಡ್ 19 ಲಸಿಕೆಯ ಅಡ್ಡಪರಿಣಾಮದಿಂದ ಸಾವು ಸಂಭವಿಸಲ್ಲ: ಏಮ್ಸ್ ನಿರ್ದೇಶಕ
- Education
UAS Dharwad Recruitment 2021: ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಜ.28ಕ್ಕೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ತಾಜಾ ಕತೆಯೊಂದಿಗೆ ಮರಳಿದ ಜೇಕಬ್ ವರ್ಗೀಸ್
ಕನ್ನಡ ಚಿತ್ರರಂಗದಲ್ಲಿ ಹೊಸ ಭರವಸೆ ಹುಟ್ಟುಹಾಕಿದ ಜೇಕಬ್ ವರ್ಗೀಸ್ ಸ್ವಲ್ಪ ಗ್ಯಾಪ್ನ ಬಳಿಕ ಮತ್ತೊಂದು ತಾಜಾ ಚಿತ್ರಕತೆಯೊಂದಿಗೆ ಮರಳಿದ್ದಾರೆ. ಈ ಬಾರಿ ಅವರು ಪ್ರೀತಿ ಪ್ರೇಮದ ಕಥನಕ್ಕೆ ಶರಣೆಂದಿದ್ದಾರೆ. ಈ ಹಿಂದೆ ಅವರ ನಿರ್ದೇಶನದಲ್ಲಿ ಬಂದಂತಹ 'ಸವಾರಿ' (ರೀಮೇಕ್) ಹಾಗೂ 'ಪೃಥ್ವಿ' (ಸ್ವಮೇಕ್) ಚಿತ್ರಗಳು ಜನ ಮೆಚ್ಚುಗೆಗೆ ಪಾತ್ರವಾಗಿದ್ದವು.
ಬಳ್ಳಾರಿ ಗಣಿ ಮಾಫಿಯಾ ಬಗ್ಗೆ ಬೆಳಕು ಚೆಲ್ಲುವ 'ಪೃಥ್ವಿ' ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಐಎಎಸ್ ಅಧಿಕಾರಿಯಾಗಿ ಖಡಕ್ ಅಭಿನಯ ನೀಡಿದ್ದರು. ಈ ಬಾರಿಯೂ ಪುನೀತ್ ಅವರನ್ನೆ ತಮ್ಮ ಚಿತ್ರಕ್ಕೆ ನಾಯಕ ನಟ ಅಂದುಕೊಂಡಿದ್ದರಂತೆ. ಆದರೆ ಪುನೀತ್ ಡೇಟ್ಸ್ ಸಿಗದೆ ಈಗವರು ಹೊಸಬರಿಗೆ ಬಲೆ ಬೀಸಿದ್ದಾರೆ.
ಇದಕ್ಕಾಗಿ ಅವರು ಬೆಂಗಳೂರು ಹಾಗೂ ಮೈಸೂರಿನಲ್ಲಿ ಆಡಿಷನ್ ಕೂಡ ನಡೆಸಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ಹೊಸ ಪ್ರತಿಭೆಯನ್ನು ಪರಿಚಯಿಸುವ ಸನ್ನಾಹದಲ್ಲಿದ್ದಾರೆ ಜೇಕಬ್. ಇದೇ ಚಿತ್ರವನ್ನು ತೆಲುಗಿನಲ್ಲಿ ಮಾಡುವ ಉದ್ದೇಶ ಜೇಕಬ್ ಅವರಿಗಿದೆ. ಚಿತ್ರದ ಸಂಪೂರ್ಣ ವಿವರಗಳು ಇನ್ನಷ್ಟೆ ಹೊರಬೀಳಬೇಕು. (ದಟ್ಸ್ಕನ್ನಡ ಸಿನಿವಾರ್ತೆ)