Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಾಜಾ ಕತೆಯೊಂದಿಗೆ ಮರಳಿದ ಜೇಕಬ್ ವರ್ಗೀಸ್
ಕನ್ನಡ ಚಿತ್ರರಂಗದಲ್ಲಿ ಹೊಸ ಭರವಸೆ ಹುಟ್ಟುಹಾಕಿದ ಜೇಕಬ್ ವರ್ಗೀಸ್ ಸ್ವಲ್ಪ ಗ್ಯಾಪ್ನ ಬಳಿಕ ಮತ್ತೊಂದು ತಾಜಾ ಚಿತ್ರಕತೆಯೊಂದಿಗೆ ಮರಳಿದ್ದಾರೆ. ಈ ಬಾರಿ ಅವರು ಪ್ರೀತಿ ಪ್ರೇಮದ ಕಥನಕ್ಕೆ ಶರಣೆಂದಿದ್ದಾರೆ. ಈ ಹಿಂದೆ ಅವರ ನಿರ್ದೇಶನದಲ್ಲಿ ಬಂದಂತಹ 'ಸವಾರಿ' (ರೀಮೇಕ್) ಹಾಗೂ 'ಪೃಥ್ವಿ' (ಸ್ವಮೇಕ್) ಚಿತ್ರಗಳು ಜನ ಮೆಚ್ಚುಗೆಗೆ ಪಾತ್ರವಾಗಿದ್ದವು.
ಬಳ್ಳಾರಿ ಗಣಿ ಮಾಫಿಯಾ ಬಗ್ಗೆ ಬೆಳಕು ಚೆಲ್ಲುವ 'ಪೃಥ್ವಿ' ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಐಎಎಸ್ ಅಧಿಕಾರಿಯಾಗಿ ಖಡಕ್ ಅಭಿನಯ ನೀಡಿದ್ದರು. ಈ ಬಾರಿಯೂ ಪುನೀತ್ ಅವರನ್ನೆ ತಮ್ಮ ಚಿತ್ರಕ್ಕೆ ನಾಯಕ ನಟ ಅಂದುಕೊಂಡಿದ್ದರಂತೆ. ಆದರೆ ಪುನೀತ್ ಡೇಟ್ಸ್ ಸಿಗದೆ ಈಗವರು ಹೊಸಬರಿಗೆ ಬಲೆ ಬೀಸಿದ್ದಾರೆ.
ಇದಕ್ಕಾಗಿ ಅವರು ಬೆಂಗಳೂರು ಹಾಗೂ ಮೈಸೂರಿನಲ್ಲಿ ಆಡಿಷನ್ ಕೂಡ ನಡೆಸಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ಹೊಸ ಪ್ರತಿಭೆಯನ್ನು ಪರಿಚಯಿಸುವ ಸನ್ನಾಹದಲ್ಲಿದ್ದಾರೆ ಜೇಕಬ್. ಇದೇ ಚಿತ್ರವನ್ನು ತೆಲುಗಿನಲ್ಲಿ ಮಾಡುವ ಉದ್ದೇಶ ಜೇಕಬ್ ಅವರಿಗಿದೆ. ಚಿತ್ರದ ಸಂಪೂರ್ಣ ವಿವರಗಳು ಇನ್ನಷ್ಟೆ ಹೊರಬೀಳಬೇಕು. (ದಟ್ಸ್ಕನ್ನಡ ಸಿನಿವಾರ್ತೆ)