Don't Miss!
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- News Namma Metro Pink Line: ಮೆಟ್ರೋ ಸುರಂಗ ಕಾಮಗಾರಿ ಬಹುತೇಕ ಪೂರ್ಣ: ಯೋಜನೆಯ ಅಪ್ಡೇಟ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಂಚಮವೇದ ವಿಶ್ವನಾಥ್ ಮರಳಿ ನಿರ್ದೇಶನಕ್ಕೆ
ಗುಣಾತ್ಮಕ ಚಿತ್ರಗಳಿಗೆ ಹೆಸರಾದ ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕ ಪಿ.ಎಚ್.ವಿಶ್ವನಾಥ್ ಮಕ್ಕಳ ಸಿನಿಮಾ ಮೂಲಕ ಮತ್ತೆ ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ. ಕನ್ನಡ ಚಿತ್ರರಂಗದ ಖ್ಯಾತ ಸಿನಿಮಾ ನಿರ್ದೇಶಕ ಎಸ್.ಆರ್.ಪುಟ್ಟಣ್ಣ ಕಣಗಾಲ್ ಅವರ ಬಳಿ ಸಹಾಯಕ ನಿರ್ದೇಶಕರಾಗಿ ವಿಶ್ವನಾಥ್ ಕೆಲಸ ಮಾಡಿದ್ದರು. ಪುಟ್ಟಣ್ಣ ಕಣಗಾಲರ 'ಪಡುವಾರಳ್ಳಿ ಪಾಂಡವರು, ಧರ್ಮಸೆರೆ, ರಂಗನಾಯಕಿ ಮತ್ತು ಮಾನಸ ಸರೋವರ' ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ನಂತರ ಟಿ.ಎಸ್.ನಾಗಾಭರಣರ 'ಆಸ್ಫೋಟ' ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿ ದುಡಿದ ಅನುಭವಿ ವಿಶ್ವನಾಥ್.
ಅವರ ಸ್ವತಂತ್ರ ನಿರ್ದೇಶನದ 'ಪಂಚಮವೇದ' ಚಿತ್ರ1989-90ರಲ್ಲಿ ರಾಜ್ಯ ಪ್ರಶಸ್ತಿಯನ್ನು ಬಾಚಿಕೊಂಡಿತ್ತು. ನಂತರ ದೇವದಾಸಿ ಪದ್ಧತಿ ಕುರಿತ 'ಅರಗಿಣಿ' ಚಿತ್ರ ಮೂರು ವಿಭಾಗಗಳಲ್ಲಿ ರಾಜ್ಯ ಪ್ರಶಸ್ತಿ ಪಡೆದಿತ್ತು. ಶ್ರೀಗಂಧ, ಮುಂಜಾನೆ ಮಂಜು, ರಂಗೋಲಿ, ಒಲವೆ ಚಿತ್ರಗಳು ವಿಶ್ವನಾಥ್ ನಿರ್ದೇಶನದ ಇನ್ನಿತರೆ ಕನ್ನಡ ಚಿತ್ರಗಳು. ಅವರ ನಿರ್ದೇಶನದ ಒಲವೆ ಚಿತ್ರವೇ ಕೊನೆಯದು. ಸುದೀರ್ಘ ವಿರಾಮದ ನಂತರ ಮಕ್ಕಳ ಚಿತ್ರದ ಮೂಲಕ ಈಗ ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ.
ಅಂದಹಾಗೆ ಕಿನ್ನರ ಬಾಲೆ ಯನ್ನು ವಿಶ್ವನಾಥ್ ಅವರೆ ನಿರ್ಮಿಸುತ್ತಿದ್ದಾರೆ. ಛಾಯಾಗ್ರಹಣ ಮಂಜುನಾಥ್. ಚಿತ್ರಕ್ಕೆ ಸ್ಲಂ ಹಾಗೂ ಮೀನುಗಾರರ ನೇಪಥ್ಯ ಬೇಕಾಗಿರುವ ಕಾರಣ ಚಿತ್ರೀಕರಣವನ್ನು ಭಟ್ಕಳದಲ್ಲಿ ಪ್ರಾರಂಭಿಸುತ್ತಿರುವುದಾಗಿ ವಿಶ್ವನಾಥ್ ತಿಳಿಸಿದ್ದಾರೆ. ಬೇಬಿ ಮಧುಶ್ರೀ ಮತ್ತು ಬೇಬಿ ಶ್ರೇಯಾ ಚಿತ್ರದ ಪ್ರಧಾನ ಪಾತ್ರಧಾರಿಗಳು.
(ದಟ್ಸ್ ಕನ್ನಡ ಚಿತ್ರವಾರ್ತೆ)