Don't Miss!
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುಬೈನಲ್ಲಿ ಬಾಬು ಮತ್ತು ಪರಿವಾರ
ಹಲವು ವರ್ಷಗಳ ನಂತರ ಅಭಿನಯಕ್ಕೆ ಮರಳಿರುವ ಕುಮಾರ್ಗೋವಿಂದ್ ಕೂಡ ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ. ತೈಲನಗರದಲ್ಲಿ ನಡೆಯುವ ಸಾಹಸ ಸನ್ನಿವೇಶಕ್ಕೆ ಥ್ರಿಲ್ಲರ್ಮಂಜು, ರವಿವರ್ಮ ಸಾಹಸ ಸಂಯೋಜಿಸಿದರೆ ಹಾಡುಗಳಿಗೆ ತ್ರಿಭುವನ್, ಫೈವ್ಸ್ಟಾರ್ ಗಣೇಶ್ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ. ಮಾತಿನ ಭಾಗದ ಚಿತ್ರೀಕರಣ ಪೂರೈಸಿರುವ ಭಾಗಕ್ಕೆ ಡಬ್ಬಿಂಗ್ ಕೂಡ ಪೂರ್ಣವಾಗಿದೆ. ಒಟ್ಟಿನಲ್ಲಿ ಶ್ರೀಮಂತಿಕೆಯಿಂದ ಮೂಡಿಬರಲಿರುವ ದುಬೈಬಾಬು ನೋಡುಗರನ್ನು ಸಂತಸದ ಕಡಲಲ್ಲಿ ತೇಲಿಸುವುದು ಖಚಿತ.
ಹಿಂದೆ ಗೌರಮ್ಮ, ಕುಟುಂಬದಂತಹ ಯಶಸ್ವಿ ಚಿತ್ರಗಳನ್ನು ನೀಡಿದ ಶೈಲೇಂದ್ರಬಾಬು ಶೈಲೇಂದ್ರ ಪ್ರೊಡಕ್ಷನ್ಸ್ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ನಾಗಣ್ಣ ಚಿತ್ರಕತೆ ಬರೆದು ನಿರ್ದೇಶಿಸುತ್ತಿರುವ 'ದುಬೈಬಾಬು' ಚಿತ್ರಕ್ಕೆ ಮುಂಬೈನ ಅನಿಲ್ಜವೇರಿ ಅವರ ಛಾಯಾಗ್ರಹಣವಿದೆ. ಮುಸ್ಸಂಜೆಮಾತು ಖ್ಯಾತಿಯ ವಿ.ಶ್ರೀಧರ್ ಅವರ ಸಂಗೀತ, ಗೋವರ್ಧನ್ ಸಂಕಲನ, ಥ್ರಿಲ್ಲರ್ಮಂಜು ಸಾಹಸ, ಅಣ್ಣಯ್ಯ ಕಲೆ, ಕೇಶವಾದಿತ್ಯ ಸಂಭಾಷಣೆ, ತ್ರಿಭುವನ್ ನೃತ್ಯ, ಪ್ರಶಾಂತ್ ಸಹನಿರ್ದೇಶನ, ಮುರುಳಿ ನಿರ್ಮಾಣನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ನಿಖಿತಾ, ಸಲೋನಿ, ಕುಮಾರ್ಗೋವಿಂದ್, ಆರ್ಯನ್ವೈದ್ಯ, ಸುಂದರರಾಜ್, ರಾಜೇಶ್, ದ್ವಾರಕೀಶ್, ಸೂರ್ಯಪಲ್ಲಕ್ಕಿ, ಎಂ.ಎಸ್.ಉಮೇಶ್ ಮುಂತಾದವರಿದ್ದಾರೆ.
(ದಟ್ಸ್
ಕನ್ನಡ
ಚಿತ್ರವಾರ್ತೆ)
ದುಬೈ
ಬಾಬು
ಉಪ್ಪಿಗೆ
ಜೋಡಿಯಾದ
ನಿಕಿತಾ