Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೂಸಾ ತಿಂದು ಚೇತರಿಸಿಕೊಂಡ ದುನಿಯಾ ವಿಜಯ್
ತನ್ನ ಹಳೆ ಗೆಳೆಯರಿಂದ ಗೂಸಾ ತಿಂದು ಆಸ್ಪತ್ರೆ ಸೇರಿದ್ದ ನಟ ದುನಿಯಾ ವಿಜಯ್ ಚೇತರಿಸಿಕೊಂಡಿದ್ದಾರೆ. ಜೂನ್.27ರಂದು ಸೃಜನ್ ಲೋಕೇಶ್ ಅವರ ಹುಟ್ಟುಹಬ್ಬ ಸಮಾರಂಭದಲ್ಲಿ ದುನಿಯಾ ವಿಜಯ್ ಮೇಲೆ ಹಲ್ಲೆ ನಡೆದಿತ್ತು. ಕಂಠಪೂರ್ತಿ ಕುಡಿದಿದ್ದ ದುನಿಯಾ ವಿಜಯ್ ಅವರನ್ನು ಹಿಗ್ಗಾಮುಗ್ಗಾ ಹೊಡೆದಿದ್ದರು ಎನ್ನುತ್ತವೆ ಮೂಲಗಳು.
ತಮ್ಮ ಮೇಲೆ ಯಾವುದೇ ಹಲ್ಲೆ ನಡೆದಿಲ್ಲವೆಂದು ವಿಜಯ್ ಹೇಳಿಕೊಂಡಿದ್ದರು. ಹಳೆಯ ಗೆಳೆಯರಾಗಲಿ ಅಥವಾ ಯಾವುದೇ ರಿಯಲ್ ಫೈಟಿಂಗ್ ನಡೆದಿಲ್ಲ. ಇದೆಲ್ಲ ಕಟ್ಟಕತೆ ಅಷ್ಟೆ ಎಂದು ದುನಿಯಾ ವಿಜಯ್ ವಿವರ ನೀಡಿದ್ದರು. ಕಾರ್ಯಕ್ರಮದಲ್ಲಿದ್ದದ್ದು ನಿಜ. ಮಾತಿನ ಚಕಮಕಿ ನಡೆದದ್ದು ಅಷ್ಟೆ ಸತ್ಯ. ಆದರೆ ಹೊಡೆದಾಟ ನಡೆದದ್ದು ಮಾತ್ರ ಸತ್ಯಕ್ಕೆ ದೂರವಾದ ಮಾತು ಎಂದಿದ್ದರು.
ವಿಜಯ್ ಆಗಿನ್ನು ಹೀರೋ ಆಗಿರಲಿಲ್ಲ. ನಟನೊಬ್ಬನ ಜೊತೆ ಇದ್ದ. ಆ ನಟನ ಹೊಸ ಚಿತ್ರ ಬಿಡುಗಡೆಯಾಗಿದ್ದಾಗ ವಿಜಯ್ ಕುಡಿದು ಗಲಾಟೆ ಮಾಡಿದ್ದ. ಆಗ ಆ ನಟನ ಗೆಳೆಯರು ವಿಜಯ್ ಮೇಲೆ ಕೈ ಮಾಡಿದ್ದರಂತೆ. ಅದೇ ಗೆಳೆಯರು ಸೃಜನ್ ಹುಟ್ಟುಹಬ್ಬದಲ್ಲಿ ಕಾಣಿಸಿಕೊಂಡಾಗ ವಿಜಯ್ ಪಿತ್ತ ನೆತ್ತಿಗೇರಿದೆ. ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ್ದರು.