'ಸರ್ಕಸ್ 'ಚಿತ್ರ ತಕ್ಕ ಪಾಠ ಕಲಿಸಿದೆ: ದಯಾಳ್

''ಆ ಆಘಾತದಿಂದ ಚೇತರಿಸಿಕೊಂಡು 'ಕದ್ದು ಮುಚ್ಚಿ' ಚಿತ್ರವನ್ನು ಕೈಗೆತ್ತಿಕೊಂಡಿದ್ದೇನೆ. ಸರ್ಕಸ್ ಚಿತ್ರ ಒಳ್ಳೆ ಪಾಠ ಕಲಿಸಿದೆ. ಈ ಹಿಂದಿನ ತಪ್ಪುಗಳು ಈ ಚಿತ್ರದಲ್ಲಿ ಮರುಕಳಿಸದಂತೆ ಎಚ್ಚರಿಕೆ ವಹಿಸುತ್ತೇನೆ ಎನ್ನುತ್ತಾರೆ ದಯಾಳ್. ಈ ಮಧ್ಯೆ ಸರ್ಕಸ್ ಚಿತ್ರವನ್ನು ದಯಾಳ್ ತನ್ನ ಸ್ನೇಹಿತರು ಹಾಗೂ ಸಂಬಂಧಿಗಳೊಂದಿಗೆ ಮತ್ತೊಮ್ಮೆ ವೀಕ್ಷಿಸಿದ್ದಾರಂತೆ. ಚಿತ್ರದಲ್ಲಿನ ದೋಷಗಳನ್ನು ತಿಳಿಯುವ ಪ್ರಯತ್ನ ತಮ್ಮದು ಎನ್ನುತ್ತಾರೆ ದಯಾಳ್.
ಚಿತ್ರದಲ್ಲಿನ ತಪ್ಪು ಒಪ್ಪುಗಳ ಬಗ್ಗೆ ನನ್ನ್ನ ಸ್ನೇಹಿತರು ಚರ್ಚಿಸಿದ್ದಾರೆ. ನನ್ನ ಮುಂದಿನ ಚಿತ್ರಗಳಲ್ಲಿ ಈ ರೀತಿಯ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸುತ್ತೇನೆ ಎಂದು ದಯಾಳ್ ತಿಳಿಸಿದ್ದಾರೆ. ಕದ್ದು ಮುಚ್ಚಿ ಚಿತ್ರದಲ್ಲಿ ದಿಗಂತ್ ಮತ್ತು ರಾಧಿಕಾ ಪಂಡಿತ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ''ಕದ್ದು ಮುಚ್ಚಿ ಎಂಬ ಶೀರ್ಷಿಕೆಯನ್ನು ಈಗಾಗಲೇ ಮತ್ತೊಬ್ಬರು ನೋಂದಾಯಿಸಿಕೊಂಡಿದ್ದಾರೆ. ಆ ಶೀರ್ಷಿಕೆಯನ್ನು ತಮಗೆ ಕೊಡುವಂತೆ ಅವರ ಬಳಿ ವಿನಂತಿಸಿಕೊಳ್ಳುತ್ತೇನೆ'' ಎಂದು ದಯಾಳ್ ತಿಳಿಸಿದರು.
(ದಟ್ಸ್ ಕನ್ನಡ ಚಿತ್ರವಾರ್ತೆ)


Click it and Unblock the Notifications











