Don't Miss!
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- News Namma Metro Pink Line: ಮೆಟ್ರೋ ಸುರಂಗ ಕಾಮಗಾರಿ ಬಹುತೇಕ ಪೂರ್ಣ: ಯೋಜನೆಯ ಅಪ್ಡೇಟ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸರ್ಕಸ್ 'ಚಿತ್ರ ತಕ್ಕ ಪಾಠ ಕಲಿಸಿದೆ: ದಯಾಳ್
''ಆ ಆಘಾತದಿಂದ ಚೇತರಿಸಿಕೊಂಡು 'ಕದ್ದು ಮುಚ್ಚಿ' ಚಿತ್ರವನ್ನು ಕೈಗೆತ್ತಿಕೊಂಡಿದ್ದೇನೆ. ಸರ್ಕಸ್ ಚಿತ್ರ ಒಳ್ಳೆ ಪಾಠ ಕಲಿಸಿದೆ. ಈ ಹಿಂದಿನ ತಪ್ಪುಗಳು ಈ ಚಿತ್ರದಲ್ಲಿ ಮರುಕಳಿಸದಂತೆ ಎಚ್ಚರಿಕೆ ವಹಿಸುತ್ತೇನೆ ಎನ್ನುತ್ತಾರೆ ದಯಾಳ್. ಈ ಮಧ್ಯೆ ಸರ್ಕಸ್ ಚಿತ್ರವನ್ನು ದಯಾಳ್ ತನ್ನ ಸ್ನೇಹಿತರು ಹಾಗೂ ಸಂಬಂಧಿಗಳೊಂದಿಗೆ ಮತ್ತೊಮ್ಮೆ ವೀಕ್ಷಿಸಿದ್ದಾರಂತೆ. ಚಿತ್ರದಲ್ಲಿನ ದೋಷಗಳನ್ನು ತಿಳಿಯುವ ಪ್ರಯತ್ನ ತಮ್ಮದು ಎನ್ನುತ್ತಾರೆ ದಯಾಳ್.
ಚಿತ್ರದಲ್ಲಿನ ತಪ್ಪು ಒಪ್ಪುಗಳ ಬಗ್ಗೆ ನನ್ನ್ನ ಸ್ನೇಹಿತರು ಚರ್ಚಿಸಿದ್ದಾರೆ. ನನ್ನ ಮುಂದಿನ ಚಿತ್ರಗಳಲ್ಲಿ ಈ ರೀತಿಯ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸುತ್ತೇನೆ ಎಂದು ದಯಾಳ್ ತಿಳಿಸಿದ್ದಾರೆ. ಕದ್ದು ಮುಚ್ಚಿ ಚಿತ್ರದಲ್ಲಿ ದಿಗಂತ್ ಮತ್ತು ರಾಧಿಕಾ ಪಂಡಿತ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ''ಕದ್ದು ಮುಚ್ಚಿ ಎಂಬ ಶೀರ್ಷಿಕೆಯನ್ನು ಈಗಾಗಲೇ ಮತ್ತೊಬ್ಬರು ನೋಂದಾಯಿಸಿಕೊಂಡಿದ್ದಾರೆ. ಆ ಶೀರ್ಷಿಕೆಯನ್ನು ತಮಗೆ ಕೊಡುವಂತೆ ಅವರ ಬಳಿ ವಿನಂತಿಸಿಕೊಳ್ಳುತ್ತೇನೆ'' ಎಂದು ದಯಾಳ್ ತಿಳಿಸಿದರು.
(ದಟ್ಸ್ ಕನ್ನಡ ಚಿತ್ರವಾರ್ತೆ)