Don't Miss!
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- News ಭಾರತೀಯ ರೈಲ್ವೆಗೆ 171 ವರ್ಷ: ಮೊದಲ ರೈಲು ಸಂಚಾರ ಎಲ್ಲಿಂದ ಎಲ್ಲಿಗೆ? ಪೋಸ್ಟ್ ಹಂಚಿಕೊಂಡ ರೈಲ್ವೆ
- Technology ಅಗ್ಗದ ದರದಲ್ಲಿ 5G ಫೋನ್ ಖರೀದಿಸಬೇಕೆ?..ಈ ಆಫರ್ ಮಿಸ್ ಮಾಡ್ಕೋಬೇಡಿ!
- Automobiles Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Lifestyle ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಂಠೀರವ ಸ್ಟುಡಿಯೋದಲ್ಲಿ ಹೆಂಡ್ತೀರ್ ದರ್ಬಾರ್
ಮೂಲತಃ ಕೊಳ್ಳೇಗಾಲದವರಾದ ಜಿ. ರಾಮಚಂದ್ರನ್, ಈಗಾಗಲೇ, ತಮಿಳು ತೆಲುಗಿನಲ್ಲಿ 5 ಚಿತ್ರಗಳನ್ನು ನಿರ್ಮಿಸಿದ್ದಾರೆ. ಇದೀಗ ಕನ್ನಡದಲ್ಲಿ "ಹೆಡ್ತೀರ ದರ್ಬಾರ್" ಎಂಬ ಹಾಸ್ಯ ಪ್ರಧಾನ ಚಿತ್ರ ನಿರ್ಮಾಣಕ್ಕೆ ಕೈಹಾಕಿದ್ದಾರೆ. ತೆಲುಗಿನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನಿರ್ದೇಶಿಸಿದ ವಿ. ಶೇಖರ್ ಈ ಚಿತ್ರದ ಕಥೆ-ಚಿತ್ರಕಥೆ- ಬರೆದು ನಿರ್ದೇಶಿಸುತ್ತಿದ್ದಾರೆ.
ಸಂಸಾರದಲ್ಲಿ ಅದಾಯಕ್ಕಿಂತ ಮೀರಿ ಖರ್ಚು ಮಾಡಿಕೊಂಡರೆ ಯಾವ ರೀತಿ ತೊಂದರೆ ಅನಾನುಕೂಲಗಳನ್ನು ಎದುರಿಸಬೇಕಾಗುತ್ತದೆ ಎಂಬುದನ್ನು ಹಾಸ್ಯ ಮಿಶ್ರಿತವಾಗಿ ನಿರ್ದೇಶಕ ಶೇಖರ್ ನಿರೂಪಿಸಿದ್ದಾರೆ. ಚಿತ್ರದ ಪ್ರತಿ ಸನ್ನಿವೇಶವೂ ಹಾಸ್ಯದ ಹೊನಲನ್ನೇ ಹರಿಸುತ್ತದೆ ಎನ್ನುವ ನಿರ್ದೇಶಕರು, ಬೆಂಗಳೂರು ಸುತ್ತಮುತ್ತ ಮತ್ತು ಕಂಠೀರವ ಸ್ಟುಡಿಯೋದ ಗಣೇಶ ದೇವಸ್ಥಾನ, ಪೊಲೀಸ್ ಸ್ಟೇಷನ್ ಸೆಟ್ ಹಾಗೂ ಪಾರ್ಕ್ನಲ್ಲಿ ಚಿತ್ರೀಕರಣ ನಡೆಸಿ, ಮಾತಿನ ಭಾಗವನ್ನು ಸಂಪೂರ್ಣಗೊಳಿಸಿದ್ದಾರೆ. ಸಧ್ಯದಲ್ಲೇ ಹಾಡುಗಳ ಚಿತ್ರೀಕರಣವನ್ನು ಪ್ರಾರಂಭಿಸಲಿದ್ದಾರೆ.
ವರವು ಎತ್ತಣ.. ಸೆಲವು ಪತ್ತಣ ಎಂಬ ತಮಿಳು ಚಿತ್ರದ ಅವತರಣಿಕೆಯಾದ ಈ ಚಿತ್ರದಲ್ಲಿ ನಟ ರಮೇಶ್ ಹಾಗೂ ಮೀನಾ ಪ್ರಧಾನ ಪಾತ್ರ ನಿರ್ವಹಿಸುತ್ತಿದ್ದು, ಸಾಧುಕೋಕಿಲ, ರಂಗಾಯಣರಘು, ಅಂಬಿಕಾ ಸೋನಿ ಹಾಗೂ ಪ್ರೀತಿ ಪ್ರಮುಖ ತಾರಾಗಣದಲ್ಲಿದ್ದಾರೆ. ರಾಜು ಮಹೇಂದ್ರ ಛಾಯಾಗ್ರಾಹಕರಾದರೆ, ಚಿತ್ರದ 5 ಹಾಡುಗಳಿಗೆ ಸಾಧುಕೋಕಿಲರವರೇ ಸಂಗೀತ ಸಂಯೋಜನೆ ಮಾಡಿದ್ದಾರೆ.