Don't Miss!
- Sports SRH vs MI IPL Match: ಹೈಲೈಟ್ಸ್ ನಂತೆ ಕಂಡ ಲೈವ್ ಮ್ಯಾಚ್: ಮುತ್ತಿನ ನಗರಿಯಲ್ಲಿ ಆರ್ಭಟಿಸಿ ಇತಿಹಾಸದ ಪುಟ ಸೇರಿದ SRH
- Lifestyle ಬೆಂಗಳೂರಿಗರೇ... ನೀರಿನ ಕೊರತೆ ತಪ್ಪಿಸಲು ಈ ಟ್ರಿಕ್ಸ್ ಹಾಗೂ ಟಿಪ್ಸ್ ತುಂಬಾನೇ ಪ್ರಯೋಜನಕಾರಿಯಾಗಿದೆ ನೋಡಿ
- News Chitradurga Lok Sabha Constituency: ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ರಾಜಕೀಯ ಹಿನ್ನೆಲೆ ತಿಳಿಯಿರಿ-ಮಾಹಿತಿ, ವಿವರ
- Finance ಐಟಿಆರ್ ಸಲ್ಲಿಸಿದ್ದರೂ, ಆದಾಯ ತೆರಿಗೆ ಇಲಾಖೆಯಿಂದ ನಿಮಗೆ ಇಮೇಲ್ ಬಂದಿದೆಯೇ?
- Automobiles ಜಿಮ್ನಿಗೆ ಸೆಡ್ಡು ಹೊಡೆಯಲು ಎಂಜಿ ಮಾಸ್ಟರ್ ಪ್ಲಾನ್: ಸದ್ಯದಲ್ಲೇ ಕಾಮೆಟ್ ಆಧರಿಸಿ 5 ಡೋರ್ ಕಾರು ಭಾರತಕ್ಕೆ?
- Technology ರೆಡ್ಮಿಯ ಈ ಮೊಬೈಲ್ಗೆ ಇರುವ ಬಿಗ್ ಆಫರ್ ತಿಳಿದ್ರೆ, ಖಂಡಿತಾ ವಾವ್ ಅಂತೀರಾ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಂಠೀರವ ಸ್ಟುಡಿಯೋದಲ್ಲಿ ಹೆಂಡ್ತೀರ್ ದರ್ಬಾರ್
ಮೂಲತಃ ಕೊಳ್ಳೇಗಾಲದವರಾದ ಜಿ. ರಾಮಚಂದ್ರನ್, ಈಗಾಗಲೇ, ತಮಿಳು ತೆಲುಗಿನಲ್ಲಿ 5 ಚಿತ್ರಗಳನ್ನು ನಿರ್ಮಿಸಿದ್ದಾರೆ. ಇದೀಗ ಕನ್ನಡದಲ್ಲಿ "ಹೆಡ್ತೀರ ದರ್ಬಾರ್" ಎಂಬ ಹಾಸ್ಯ ಪ್ರಧಾನ ಚಿತ್ರ ನಿರ್ಮಾಣಕ್ಕೆ ಕೈಹಾಕಿದ್ದಾರೆ. ತೆಲುಗಿನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನಿರ್ದೇಶಿಸಿದ ವಿ. ಶೇಖರ್ ಈ ಚಿತ್ರದ ಕಥೆ-ಚಿತ್ರಕಥೆ- ಬರೆದು ನಿರ್ದೇಶಿಸುತ್ತಿದ್ದಾರೆ.
ಸಂಸಾರದಲ್ಲಿ ಅದಾಯಕ್ಕಿಂತ ಮೀರಿ ಖರ್ಚು ಮಾಡಿಕೊಂಡರೆ ಯಾವ ರೀತಿ ತೊಂದರೆ ಅನಾನುಕೂಲಗಳನ್ನು ಎದುರಿಸಬೇಕಾಗುತ್ತದೆ ಎಂಬುದನ್ನು ಹಾಸ್ಯ ಮಿಶ್ರಿತವಾಗಿ ನಿರ್ದೇಶಕ ಶೇಖರ್ ನಿರೂಪಿಸಿದ್ದಾರೆ. ಚಿತ್ರದ ಪ್ರತಿ ಸನ್ನಿವೇಶವೂ ಹಾಸ್ಯದ ಹೊನಲನ್ನೇ ಹರಿಸುತ್ತದೆ ಎನ್ನುವ ನಿರ್ದೇಶಕರು, ಬೆಂಗಳೂರು ಸುತ್ತಮುತ್ತ ಮತ್ತು ಕಂಠೀರವ ಸ್ಟುಡಿಯೋದ ಗಣೇಶ ದೇವಸ್ಥಾನ, ಪೊಲೀಸ್ ಸ್ಟೇಷನ್ ಸೆಟ್ ಹಾಗೂ ಪಾರ್ಕ್ನಲ್ಲಿ ಚಿತ್ರೀಕರಣ ನಡೆಸಿ, ಮಾತಿನ ಭಾಗವನ್ನು ಸಂಪೂರ್ಣಗೊಳಿಸಿದ್ದಾರೆ. ಸಧ್ಯದಲ್ಲೇ ಹಾಡುಗಳ ಚಿತ್ರೀಕರಣವನ್ನು ಪ್ರಾರಂಭಿಸಲಿದ್ದಾರೆ.
ವರವು ಎತ್ತಣ.. ಸೆಲವು ಪತ್ತಣ ಎಂಬ ತಮಿಳು ಚಿತ್ರದ ಅವತರಣಿಕೆಯಾದ ಈ ಚಿತ್ರದಲ್ಲಿ ನಟ ರಮೇಶ್ ಹಾಗೂ ಮೀನಾ ಪ್ರಧಾನ ಪಾತ್ರ ನಿರ್ವಹಿಸುತ್ತಿದ್ದು, ಸಾಧುಕೋಕಿಲ, ರಂಗಾಯಣರಘು, ಅಂಬಿಕಾ ಸೋನಿ ಹಾಗೂ ಪ್ರೀತಿ ಪ್ರಮುಖ ತಾರಾಗಣದಲ್ಲಿದ್ದಾರೆ. ರಾಜು ಮಹೇಂದ್ರ ಛಾಯಾಗ್ರಾಹಕರಾದರೆ, ಚಿತ್ರದ 5 ಹಾಡುಗಳಿಗೆ ಸಾಧುಕೋಕಿಲರವರೇ ಸಂಗೀತ ಸಂಯೋಜನೆ ಮಾಡಿದ್ದಾರೆ.