Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ದರ್ಶನ್ ಜಾಮೀನು ಅರ್ಜಿ ವಜಾ, ಜೈಲೇ ಗತಿನಾ?
ನಟ ದರ್ಶನ್ ಪರ ವಕೀಲ ಎಸ್ ಕೆ ವೆಂಕಟರೆಡ್ಡಿ ಅವರು ದರ್ಶನ್ ಪತ್ನಿ ಮೇಲೆ ಅನುಕಂಪ ತೋರಿ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಆದರೆ ಇದಕ್ಕೆ ಸರ್ಕಾರಿ ಅಭಿಯೋಜಕ ಎಸ್ ಸಿ ಅಗಸಿ ಮನಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು. ವಾದ ವಿವಾದಗಳನ್ನು ಆಲಿಸಿದ ಸೆಷನ್ಸ್ ನ್ಯಾಯಾಲಯದ ನ್ಯಾಯಧೀಶರು ತೀರ್ಪನ್ನು ಮಂಗಳವಾರಕ್ಕೆ(ಸೆ.20) ಮುಂದೂಡಿದ್ದರು.
ಸೆ.20ರಂದು ತೀರ್ಪು ಪ್ರಕಟಿಸಿದ ನ್ಯಾಯಾಧೀಶರು ದರ್ಶನ್ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ. ಯಾವ ಕಾರಣಗಳಿಗೆ ಜಾಮೀನು ಅರ್ಜಿ ನಿರಾಕರಿಸಲಾಗಿದೆ ಎಂಬುದನ್ನು 21 ಪುಟಗಳ ಆದೇಶದಲ್ಲಿ ನ್ಯಾಯಾಧೀಶ ಆರ್ ಬಿ ಬೂದಿಹಾಳ್ ತಿಳಿಸಿದ್ದಾರೆ. ಬುಧವಾರ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸುವುದಾಗಿ ದರ್ಶನ್ ಪರ ವಕೀಲ ವೆಂಕಟರೆಡ್ಡಿ ತಿಳಿಸಿದ್ದಾರೆ.
ನಟ ದರ್ಶನ್ ಅವರ ಬಹಳಷ್ಟು ಅಭಿಮಾನಿಗಳು, ಅವರ ಮೇಲೆ ಬಂಡವಾಳ ಹೂಡಿರುವ ನಿರ್ಮಾಪಕರು ಅವರಿಗೆ ಜಾಮೀನು ಸಿಗುತ್ತದೆ ಎಂದು ಕಾತುರದಿಂದ ನಿರೀಕ್ಷಿಸಿದ್ದರು. ಆದರೆ ಇಂದು ತೀರ್ಪು ಹೊರಬೀಳುತ್ತಿದ್ದಂತೆ ಅವರೆಲ್ಲಾ ತೀವ್ರ ತಳಮಳಗೊಂಡಿದ್ದಾರೆ. (ದಟ್ಸ್ಕನ್ನಡ ಸಿನಿವಾರ್ತೆ)