Don't Miss!
- News Gold Price: ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಇಳಿಕೆ, ಇಂದಿನ ಬೆಲೆ ವಿವರ
- Lifestyle ಬಾಯಿ ಚಪ್ಪರಿಸಿ ಸವಿಯುವ ನೆಲ್ಲಿಕಾಯಿ ಉಪ್ಪಿನಕಾಯಿ..!
- Finance BMRCL: ಇಂದು ನಮ್ಮ ಮೆಟ್ರೋ ಕಾರ್ಯಾಚರಣೆ ಅವಧಿ ವಿಸ್ತರಣೆ, ಸಮಯ ವಿವರ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರ ನಿರ್ದೇಶನಕ್ಕೆ ನವರಸ ನಾಯಕ ಜಗ್ಗೇಶ್
ಇದೀಗ ತಾನೆ ಮಲ್ಲೇಶ್ವರಂನಿಂದ ಬಂದ ಸುದ್ದಿ. ನವರಸ ನಾಯಕ ಜಗ್ಗೆಶ್ ಅವರ ಹಳೆಯ ಆಸೆಗೆ ಕಡೆಗೂ ಜೀವಬಂದಿದೆ. ಏನಪ್ಪಾ ಅದು ಅಂದ್ರೆ, ಲೈಟ್ಸ್ , ಕ್ಯಾಮೆರಾ, ಆಕ್ಷನ್ ಎಂದು ಹೇಳಬೇಕೆಂಬುದು ಜಗ್ಗೇಶ್ ಅವರ ಬಹುದಿನದ ಆಸೆ. ಈ ಆಸೆಯನ್ನು ಸಮಯ ಸಿಕ್ಕಾಗಲೆಲ್ಲಾ ಅವರು ಹೇಳುತ್ತಲೇ ಬಂದಿದ್ದರು.
ಈಗ ಅವರ ಆಸೆ ನೆರವೇರುವ ಲಕ್ಷಣಗಳು ಕಾಣಿಸುತ್ತಿವೆ. ಅವರದೇ ಜೀವನ ಕಥೆಗೆ ಅವರೇ ಆಕ್ಷನ್, ಕಟ್ ಹೇಳಲು ಹೊರಟಿದ್ದಾರೆ. ಆದರೆ ಒಂದು ವಿಚಿತ್ರ ಅಂದರೆ ಜಗ್ಗೇಶ್ ಪಾತ್ರವನ್ನು ಅವರ ಮಗ ಗುರುರಾಜ್ ಜಗ್ಗೇಶ್ ಮಾಡಲಿದ್ದಾರೆ. ಹೇಗಿದೆ ಜಗ್ಗೇಶ್ ವರಸೆ!
ಸದ್ಯಕ್ಕೆ ಮುಸ್ಸಂಜೆ ಮಹೇಶ್ ಅವರ 'ಸಂಕ್ರಾಂತಿ' ಎಂಬ ಚಿತ್ರದಲ್ಲಿ ಗುರುರಾಜ್ ಬಿಜಿಯಾಗಿದ್ದಾರೆ. ಆ ಚಿತ್ರದ ಬಳಿಕ ಜಗ್ಗೇಶ್ ಚಿತ್ರ ಸೆಟ್ಟೇರಲಿದೆ ಎನ್ನುತ್ತವೆ ಮೂಲಗಳು. ಜಗ್ಗೇಶ್ ನಡೆದು ಬಂದ ಹಾದಿ ಒಂದು ರೀತಿ ವಿಚಿತ್ರ,ವಿಸ್ಮಯ. ಅದನ್ನೇ ಕತೆ ಮಾಡಿದರೆ ಹೇಗೆ ಎಂಬ ಜಿಜ್ಞಾಸೆಯೇ ಅವರನ್ನು ನಿರ್ದೇಶಕರನ್ನಾಗಿ ಮಾಡುತ್ತಿದೆ.
ತಮ್ಮ ವಿಚಿತ್ರ, ವಿಸ್ಮಯ ಕಥೆಯನ್ನು ಯಾರೋ ನಿರ್ದೇಶಿಸುವ ಬದಲು ನೀವೇ ಒಂದು ಕೈ ನೋಡಿದರೆ ಹೇಗೆ? ಎಂದು ಜಗ್ಗೇಶ್ ಆಪ್ತರು ಸಲಹೆ ಕೊಟ್ಟಿದ್ದಾರೆ. ಅವರ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಗ್ಗೇಶ್ ಈಗ ನಿರ್ದೇಶಕನ ಅವತಾರ ಎತ್ತಲು ಸಿದ್ಧತೆ ನಡೆಸಿದ್ದಾರೆ. ಮಲ್ಲೇಶ್ವರದಿಂದ ಹಿಡಿದು ಗಾಂಧಿನಗರ ತನಕ ಜಗ್ಗೇಶ್ ನಿರ್ದೇಶಕರಾಗುವ ಸುದ್ದಿ ಹಬ್ಬಿದೆ. ಅದು ಎಷ್ಟು ನಿಜವೋ ಎಷ್ಟು ಸುಳ್ಳೋ ಎಂಬುದನ್ನು ಸ್ವತಃ ಜಗ್ಗೇಶ್ ಅವರೇ ಸ್ಪಷ್ಟಪಡಿಸಬೇಕಾಗಿದೆ.