Don't Miss!
- News ದೇವೇಗೌಡರು ಕಣ್ಣೀರು ಹಾಕುವಂತೆ ಯಾರು ಏನು ಮಾಡಿದ್ದಾರೆ? ಡಿ ಕೆ ಶಿವಕುಮಾರ್ ಹೇಳಿದ್ದೇನು?
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಬ್ಸಿಡಿ ಚಿತ್ರಗಳ ಆಯ್ಕೆಪಟ್ಟಿಗೆ ಬ್ರೇಕ್ ಹಾಕಿದ ಸಿಎಂ
2009-10ನೇ ಸಾಲಿನ ಸಬ್ಸಿಡಿ ಚಿತ್ರಗಳ ಆಯ್ಕೆಯಲ್ಲಿ ಭಾರಿ ಗೋಲ್ಮಾಲ್ ನಡೆದಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ಆಯ್ಕೆ ಪಟ್ಟಿಯನ್ನು ತಡೆಹಿಡಿದಿದ್ದಾರೆ. ಕನ್ನಡ ಚಲನಚಿತ್ರ ನಿರ್ಮಾಪಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸಬ್ಸಿಡಿ ಚಿತ್ರಗಳ ಆಯ್ಕೆಯಲ್ಲಿ ನಡೆದಿರುವ ಅವ್ಯಾವಹಾರದ ಬಗ್ಗೆ ತಿಳಿಸಿದ್ದರು.
ಬಜೆಟ್ ಮಂಡನೆ ಹಾಗೂ ರಾಜ್ಯ ರಾಜಕೀಯದಲ್ಲಿ ಎದ್ದಿರುವ ಬಿರುಗಾಳಿಯನ್ನೂ ಲೆಕ್ಕಿಸದ ಮುಖ್ಯಮಂತ್ರಿಗಳು, ನಿರ್ಮಾಪಕರ ಸಮಸ್ಯೆಗಳನ್ನು ಸಾವಧಾನದಿಂದ ಕೇಳಿ ಕೋಲ್ಗೆಟ್ ನಗೆ ಬೀರಿ ಸಬ್ಸಿಡಿ ಆಯ್ಕೆ ಪಟ್ಟಿಯನ್ನು ತಡೆಹಿಡಿಯುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಮಾ.16ರಂದು ಸುವರ್ಣ ವಾಹಿನಿಯ ಕುಟುಕು ಕಾರ್ಯಾಚರಣೆಯಲ್ಲಿ ಸಬ್ಸಿಡಿ ಚಿತ್ರಗಳ ಆಯ್ಕೆಯಲ್ಲಿ ನಡೆದಿರುವ ಗೋಲ್ಮಾಲ್ ಬಯಾಲಾಗಿತ್ತು. ನಿರ್ದೇಶಕ ಕೂಡ್ಲು ರಾಮಕೃಷ್ಣ ಬಳಿ ಸಬ್ಸಿಡಿ ಸಮಿತಿ ಆಯ್ಕೆ ಸಮಿತಿ ಸದಸ್ಯ ಸುರೇಶ್ ಮಂಗಳೂರು ಲಂಚ ಪಡೆದಿದ್ದದ್ದು ಬಹಿರಂಗವಾಗಿತ್ತು.
ಈ ಹಿನ್ನೆಲೆಯಲ್ಲಿ ಚಲನಚಿತ್ರ ನಿರ್ಮಾಪಕರಾದ ಮುನಿರತ್ನ, ರಾಮು, ಸೂರಪ್ಪ ಬಾಬು, ಉಮೇಶ್ ಬಣಕಾರ್, ಎನ್ಎಂ ಸುರೇಶ್, ಕೆಎಂ ವೀರೇಶ್, ಡಿಕೆ ರಾಮಕೃಷ್ಣ, ಪರಮೇಶ್, ಪ್ರೇಮ್, ಮಹೇಶ್ ಸುಖಧರೆ, ರಮೇಶ್ ಕಶ್ಯಪ್, ನರಸಿಂಹರಾಜು ಸೇರಿದಂತೆ ಹಲವರು ಸಿಎಂರನ್ನು ಭೇಟಿ ಮಾಡಿ ಸಬ್ಸಿಡಿ ಹಗರಣದ ಡಿವಿಡಿಯನ್ನು ಹಸ್ತಾಂತರಿಸಿದ್ದರು. (ಏಜೆನ್ಸೀಸ್)