Don't Miss!
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- News ಡಿಕೆ ಬ್ರದರ್ಸ್ ಭದ್ರಕೋಟೆಯಲ್ಲಿ ಮೋದಿ, ಅಮಿತ್ ಶಾ, ಯೋಗಿ ಪ್ರಚಾರ: ಡಿ ಕೆ ಸುರೇಶ್ ಹೇಳಿದ್ದೇನು?
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನಕ್ಕೆ ವೇದಿಕೆ ಸಜ್ಜು
ಸಚಿವರಾದ ಆರ್ ಅಶೋಕ್, ಸಂಸದ ಅನಂತಕುಮಾರ್, ನಟರಾದ ಅಂಬರೀಷ್, ವಿ ರವಿಚಂದ್ರನ್, ಜಗ್ಗೇಶ್, ಶ್ರೀನಾಥ್, ದೊಡ್ಡರಂಗೇಗೌಡ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಟಿ.ಎಸ್.ನಾಗಾಭರಣ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಸಂತಕುಮಾರ್ ಪಾಟೀಲ್ ಮುಖ್ಯ ಅತಿಥಿಗಳಾಗಿ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.
ಡಾ.ರಾಜ್ ಕುಮಾರ್ ಪ್ರಶಸ್ತಿಯು ಹಿರಿಯ ಅಭಿನೇತ್ರಿ ಬಿ ಸರೋಜಾ ದೇವಿ ಅವರಿಗೆ ವರಿಸಿದ್ದು, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಕೆ ಎಸ್ ಆರ್ ದಾಸ್ ಅವರಿಗೆ ಪ್ರದಾನ ಮಾಡಲಾಗುತ್ತದೆ. ಡಾ.ವಿಷ್ಣುವರ್ಧನ್ ಪ್ರಶಸ್ತಿಯು ವಿ ಆರ್ ರಾಜು ಮತ್ತು ಪಿ ಎನ್ ಕೆ ಪ್ರಸಾದ್ ಅವರಿಗೆ ನೀಡಲಾಗುತ್ತದೆ. ಯೋಗೇಶ್ ಮತ್ತು ರಾಧಿಕಾ ಪಂಡಿತ್ ಅವರು ಕ್ರಮವಾಗಿ ಅತ್ಯುತ್ತಮನಟ, ನಟಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಹಿರಿಯ ನಟಿ ಲಕ್ಷ್ಮಿ ಅವರು ಅತ್ಯುತ್ತಮ ಪೋಷಕ ನಟಿ ಗೌರವಕ್ಕೆ ಪಾತ್ರರಾಗಿದ್ದಾರೆ.
ಎರಡುವರೆ ಗಂಟೆಗಳ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಬಿ .ಸರೋಜಾದೇವಿ ಅಭಿನಯದ ಅಮರಶಿಲ್ಪಿ ಜಕಣಾಚಾರಿ ಚಿತ್ರದ "ಚೆಲುವಾಂಥ ಚೆನ್ನಿಗನೆ..." ಹಾಡಿಗೆ ತಾರಾ ಹೆಜ್ಜೆ ಹಾಕಲಿದ್ದಾರೆ. ಆಪ್ತರಕ್ಷಕ ಚಿತ್ರದ ಹಾಡೊಂದಕ್ಕೆ ಶ್ರೀನಗರ ಕಿಟ್ಟಿ ಮತ್ತು ರೂಪಿಕಾ ನೃತ್ಯ ಮಾಡಲಿದ್ದಾರೆ. ಗುರುರಾಜ್ ಮತ್ತವರ ತಂಡದಿಂದ ಮನರಂಜನೆ ಕಾರ್ಯಕ್ರಮ, ಪಂಡಿತ್ ಶೈಲೇಶ್ ಭಗವಾನ್ ಅವರಿಂದ ಶಹನಾಯಿ ವಾದನ ಪ್ರೇಕ್ಷಕರನ್ನು ರಂಜಿಸಲಿದೆ. (ದಟ್ಸ್ಕನ್ನಡ ಸಿನಿವಾರ್ತೆ)