Just In
- 34 min ago
ಬಾಯ್ ಫ್ರೆಂಡ್ ನನ್ನು ತಬ್ಬಿಕೊಂಡಿದ್ದಾರಾ ಕತ್ರಿನಾ ಕೈಫ್; ಇದು ಆ ಸ್ಟಾರ್ ನಟನೇ ಎನ್ನುತ್ತಿದ್ದಾರೆ ನೆಟ್ಟಿಗರು
- 2 hrs ago
ತಮನ್ನಾ ಮತ್ತು ವಿರಾಟ್ ಕೊಹ್ಲಿಗೆ ಕೇರಳ ಹೈಕೋರ್ಟ್ ನೋಟಿಸ್
- 3 hrs ago
ಕಿಶೋರ್ ಮತ್ತು ಹರಿಪ್ರಿಯಾ ನಟನೆಯ 'ಅಮೃತಮತಿ' ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
- 11 hrs ago
ಡ್ರಗ್ಸ್ ಪ್ರಕರಣ: ಇಂದ್ರಜಿತ್ ಲಂಕೇಶ್ ಗೆ ಮತ್ತೆ ಬುಲಾವ್ ನೀಡಿದ ಸಿಸಿಬಿ
Don't Miss!
- News
ಸ್ಯಾಂಡಲ್ ವುಡ್ ಡ್ರಗ್ ಡೀಲ್ ಪ್ರಕರಣ: ಇಂದ್ರಜಿತ್ ಲಂಕೇಶ್ ಗೆ ಸಿಸಿಬಿ ಬುಲಾವ್
- Finance
ಭಾರತದ ಮಾರುಕಟ್ಟೆಯಲ್ಲಿ ಈಗ ಚೀನಾ ಸ್ಮಾರ್ಟ್ ಫೋನ್ ಗಳದ್ದೇ ಹಿಡಿತ
- Automobiles
3 ಡೋರುಗಳ, 5 ಡೋರುಗಳ ಫೇಸ್ಲಿಫ್ಟ್ ಆವೃತ್ತಿಗಳನ್ನು ಪರಿಚಯಿಸಿದ ಮಿನಿ
- Sports
ಸ್ಟೇಡಿಯಂ ಒಳಗೆ ಅಭಿಮಾನಿಗಳಿಗೆ ಪ್ರವೇಶ ನೀಡಲು ಬಿಸಿಸಿಐ ಸಿದ್ಧತೆ
- Lifestyle
ಕರ್ನಾಟಕ ಶೈಲಿಯ ಅವರೆಕಾಳು ಚಿತ್ರಾನ್ನ ನಿಮಗಾಗಿ
- Education
BEL Recruitment 2021: 22 ಸರಂಕ್ಷಣೆ ಅಧಿಕಾರಿ, ಕಿರಿಯ ಮೇಲ್ವಿಚಾರಕರು ಮತ್ತು ಹವಿಲ್ದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸುದೀಪ್, ರೆಬಲ್ ಸ್ಟಾರ್ ಚಿತ್ರ ಬಿಡುಗಡೆ ಮುಂದಕ್ಕೆ
ಸುದೀಪ್ ಮತ್ತು ರೆಬಲ್ ಸ್ಟಾರ್ ಅಂಬರೀಷ್ ಮುಖ್ಯಭೂಮಿಕೆಯುಳ್ಳ ಚಿತ್ರ 'ವೀರಪರಂಪರೆ' ಬಿಡುಗಡೆ ಮುಂದೂಡಲ್ಪಟ್ಟಿದೆ. ಚಿತ್ರವನ್ನು ಮುಂದೂಡುವಂತೆ ನಿರ್ಮಾಪಕರು ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್ ಸಿಸಿ) ಒತ್ತಡ ಹೇರಿದ ಪರಿಣಾಮ ಚಿತ್ರದ ನಿರ್ದೇಶಕ ಎಸ್ ನಾರಾಯಣ್ ಚಿತ್ರವನ್ನು ಮುಂದೂಡಿದ್ದಾರೆ.
'ವೀರಪರಂಪರೆ' ಚಿತ್ರ ಅಕ್ಟೋಬರ್ 29ಕ್ಕೆ ರಾಜ್ಯದಾದ್ಯಂತ ತೆರೆಕಾಣಲಿದೆ. ಹೊರ ರಾಜ್ಯಗಳಲ್ಲೂ ಚಿತ್ರವನ್ನು ಬಿಡುಗಡೆ ಮಾಡಲು ನಾರಾಯಣ್ ಪ್ರಯತ್ನಿಸುತ್ತಿದ್ದಾರೆ. ಆದರೆ ಎಲ್ಲೆಲ್ಲಿ ಬಿಡುಗಡೆಯಾಗಲಿದೆ ಎಂಬ ವಿವರಗಳು ಸದ್ಯಕ್ಕೆ ಲಭ್ಯವಿಲ್ಲ. ಅಂದಹಾಗೆ ಈ ಚಿತ್ರದ ನಾಯಕಿ ಐಂದ್ರಿತಾ ರೇ.
ಕನ್ನಡ ಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಕೆ ಸಿ ಎನ್ ಚಂದ್ರಶೇಖರ್ ಹಾಗೂ ಕೆಎಫ್ ಸಿಸಿ ಅಧ್ಯಕ್ಷ ಬಸಂತ್ ಕುಮಾರ್ ದೂರವಾಣಿ ಮೂಲಕ 'ವೀರಪರಂಪರೆ' ಚಿತ್ರವನ್ನು ಒಂದು ವಾರ ಮುಂದೂಡುವಂತೆ ತಿಳಿಸಿದ್ದರು. ಅಕ್ಟೋಬರ್ 22ರಂದು ಬಿಡುಗಡೆಯಾಗಬೇಕಿದ್ದ 'ವೀರಪರಂಪರೆ' ಅ.29ಕ್ಕೆ ಮುಂದೂಡಲ್ಪಟ್ಟಿದೆ.
ಒಂದು ವಾರದ ಹಿಂದಷ್ಟೆ ಬಿಡುಗಡೆಯಾಗಿರುವ ಸುದೀಪ್ ಅಭಿನಯದ 'ಕಿಚ್ಚಹುಚ್ಚ' ಚಿತ್ರ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಈಗ ವೀರಪರಂಪರೆ ಬಿಡುಗಡೆ ಮಾಡಿದರೆ ನಮ್ಮ ಚಿತ್ರಕ್ಕೆ ಹೊಡೆತ ಬೀಳುತ್ತದೆ ಎಂದು ಕಿಚ್ಚ ಹುಚ್ಚ ನಿರ್ಮಾಪಕ ಕೆ ಮಂಜು ಕ್ಯಾತೆ ತೆಗೆದಿದ್ದರು. ಹಾಗಾಗಿ ವೀರಪರಂಪರೆ ಒಂದು ವಾರ ತಡವಾಗಿ ತೆರೆಗೆ ಅಪ್ಪಳಿಸುತ್ತಿದೆ.