Don't Miss!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್, ರೆಬಲ್ ಸ್ಟಾರ್ ಚಿತ್ರ ಬಿಡುಗಡೆ ಮುಂದಕ್ಕೆ
ಸುದೀಪ್ ಮತ್ತು ರೆಬಲ್ ಸ್ಟಾರ್ ಅಂಬರೀಷ್ ಮುಖ್ಯಭೂಮಿಕೆಯುಳ್ಳ ಚಿತ್ರ 'ವೀರಪರಂಪರೆ' ಬಿಡುಗಡೆ ಮುಂದೂಡಲ್ಪಟ್ಟಿದೆ. ಚಿತ್ರವನ್ನು ಮುಂದೂಡುವಂತೆ ನಿರ್ಮಾಪಕರು ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್ ಸಿಸಿ) ಒತ್ತಡ ಹೇರಿದ ಪರಿಣಾಮ ಚಿತ್ರದ ನಿರ್ದೇಶಕ ಎಸ್ ನಾರಾಯಣ್ ಚಿತ್ರವನ್ನು ಮುಂದೂಡಿದ್ದಾರೆ.
'ವೀರಪರಂಪರೆ' ಚಿತ್ರ ಅಕ್ಟೋಬರ್ 29ಕ್ಕೆ ರಾಜ್ಯದಾದ್ಯಂತ ತೆರೆಕಾಣಲಿದೆ. ಹೊರ ರಾಜ್ಯಗಳಲ್ಲೂ ಚಿತ್ರವನ್ನು ಬಿಡುಗಡೆ ಮಾಡಲು ನಾರಾಯಣ್ ಪ್ರಯತ್ನಿಸುತ್ತಿದ್ದಾರೆ. ಆದರೆ ಎಲ್ಲೆಲ್ಲಿ ಬಿಡುಗಡೆಯಾಗಲಿದೆ ಎಂಬ ವಿವರಗಳು ಸದ್ಯಕ್ಕೆ ಲಭ್ಯವಿಲ್ಲ. ಅಂದಹಾಗೆ ಈ ಚಿತ್ರದ ನಾಯಕಿ ಐಂದ್ರಿತಾ ರೇ.
ಕನ್ನಡ ಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಕೆ ಸಿ ಎನ್ ಚಂದ್ರಶೇಖರ್ ಹಾಗೂ ಕೆಎಫ್ ಸಿಸಿ ಅಧ್ಯಕ್ಷ ಬಸಂತ್ ಕುಮಾರ್ ದೂರವಾಣಿ ಮೂಲಕ 'ವೀರಪರಂಪರೆ' ಚಿತ್ರವನ್ನು ಒಂದು ವಾರ ಮುಂದೂಡುವಂತೆ ತಿಳಿಸಿದ್ದರು. ಅಕ್ಟೋಬರ್ 22ರಂದು ಬಿಡುಗಡೆಯಾಗಬೇಕಿದ್ದ 'ವೀರಪರಂಪರೆ' ಅ.29ಕ್ಕೆ ಮುಂದೂಡಲ್ಪಟ್ಟಿದೆ.
ಒಂದು ವಾರದ ಹಿಂದಷ್ಟೆ ಬಿಡುಗಡೆಯಾಗಿರುವ ಸುದೀಪ್ ಅಭಿನಯದ 'ಕಿಚ್ಚಹುಚ್ಚ' ಚಿತ್ರ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಈಗ ವೀರಪರಂಪರೆ ಬಿಡುಗಡೆ ಮಾಡಿದರೆ ನಮ್ಮ ಚಿತ್ರಕ್ಕೆ ಹೊಡೆತ ಬೀಳುತ್ತದೆ ಎಂದು ಕಿಚ್ಚ ಹುಚ್ಚ ನಿರ್ಮಾಪಕ ಕೆ ಮಂಜು ಕ್ಯಾತೆ ತೆಗೆದಿದ್ದರು. ಹಾಗಾಗಿ ವೀರಪರಂಪರೆ ಒಂದು ವಾರ ತಡವಾಗಿ ತೆರೆಗೆ ಅಪ್ಪಳಿಸುತ್ತಿದೆ.