Don't Miss!
- Technology ಇಂದು ವಿವೋ T3x 5G ಸ್ಮಾರ್ಟ್ಫೋನ್ ಫಸ್ಟ್ ಸೇಲ್; ಬೆಲೆ 13,499ರೂ.!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- News Petrol Price: ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ವಿವರ ತಿಳಿಯಿರಿ
- Finance ಎಂಡಿಎಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ ಮಾದರಿಗಳ ಪರೀಕ್ಷೆಗೆ ಮುಂದಾದ FSSAI
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡದ ತಾಕತ್ತು ದೊಡ್ಡದು - ಕಾಸರವಳ್ಳಿ
ಬೆಂಗಳೂರು : ಕನ್ನಡದಲ್ಲಿ ಗುಣಾತ್ಮಕ ಚಿತ್ರಗಳ ಕೊರತೆ ಇದೆ ಎನ್ನುವುದು ಹಸಿಹಸಿ ಸುಳ್ಳು. ಕನ್ನಡ ಚಿತ್ರರಂಗ ಹಣದಲ್ಲಿ ಹಿಂದಿದೆಯೇ ಹೊರತು ಗುಣದಲ್ಲಿ ಅಲ್ಲ ಎಂದು ಹೆಸರಾಂತ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅಭಿಪ್ರಾಯಪಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಚಿತ್ರಗಳ ಗುಣಮಟ್ಟದ ಬಗ್ಗೆ ಮಾತನಾಡುವ ಮಂದಿಗೆ ಈ ಸಾಲಿನ ರಾಷ್ಟ್ರಪ್ರಶಸ್ತಿಗಳು ತಕ್ಕ ಉತ್ತರ ನೀಡಿವೆ ಎಂದರು.
ರಾಷ್ಟ್ರಪ್ರಶಸ್ತಿ ಗಳಿಕೆಯಲ್ಲಿ ಬೆಂಗಾಲಿ, ಹಿಂದಿ ಮತ್ತು ಮಲೆಯಾಳಂ ಬಿಟ್ಟರೆ ಕನ್ನಡಕ್ಕೆ ಅಗ್ರಸ್ಥಾನ. ತಮಿಳು ಮತ್ತು ತೆಲುಗುಗಳಿಗಿಂತಲೂ ಅಧಿಕ ರಾಷ್ಟ್ರಪ್ರಶಸ್ತಿಗಳನ್ನು ಕನ್ನಡ ಚಿತ್ರರಂಗ ಪಡೆದಿದೆ. ಅನ್ಯ ಭಾಷೆ ಚಿತ್ರಗಳೊಂದಿಗೆ ಸ್ಪರ್ಧಿಸುವ ತಾಕತ್ತು ಕನ್ನಡ ಚಿತ್ರರಂಗಕ್ಕಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ನೀಡುವ ಪ್ರಶಸ್ತಿಗಳ ಮೊತ್ತವನ್ನು ಹೆಚ್ಚಿಸುವ ನಿರ್ಧಾರ ಸ್ವಾಗತಾರ್ಹ. ಇದು ಕೇವಲ ಅತ್ಯುತ್ತಮ ನಟ-ನಟಿ ಪ್ರಶಸ್ತಿಗೆ ಸೀಮಿತವಾಗಬಾರದು. ಕಲಾವಿದರ ನಡುವೆ ತಾರತಮ್ಯ ಸಲ್ಲದು ಎಂದು ಅಸಮಧಾನ ವ್ಯಕ್ತಪಡಿಸಿದರು.
ಪ್ರಶಸ್ತಿ ವಿಜೇತ ಚಿತ್ರಗಳನ್ನು ಚಿತ್ರಪ್ರೇಮಿಗಳಿಗೆ ತಲುಪಿಸಲು ಸಾಧ್ಯವಾಗುತ್ತಿಲ್ಲ. ಇಂತಹ ಚಿತ್ರಗಳ ಪ್ರದರ್ಶನಕ್ಕಾಗಿ ಸರ್ಕಾರ ಕೆಲವು ಚಿತ್ರಮಂದಿರಗಳನ್ನು ಮೀಸಲಿಡಬೇಕು ಎಂದು ಕಾಸರವಳ್ಳಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಹಾಜರಿದ್ದ ರಾಷ್ಟ್ರಪ್ರಶಸ್ತಿ ವಿಜೇತ ನಟಿ ತಾರಾ, ನನ್ನ ಎಲ್ಲಾ ಸಾಧನೆಗೆ ಕನ್ನಡಿಗರ ಪ್ರೀತಿ ಮತ್ತು ಮಾಧ್ಯಮಗಳು ನೀಡಿದ ಪ್ರೋತ್ಸಾಹವೇ ಕಾರಣ ಎಂದರು.
(ಇನ್ಫೋ ವಾರ್ತೆ)
ಇದನ್ನೂ ಓದಿ :
ತಾರಾಗೆ ಪ್ರಥಮ ರಾಷ್ಟ್ರಪ್ರಶಸ್ತಿಯ ಹಾರ
ಮುಖಪುಟ / ಸ್ಯಾಂಡಲ್ವುಡ್