Don't Miss!
- News karnataka Rain: ಇಂದಿನಿಂದ ರಾಜ್ಯದಲ್ಲಿ ಜೋರು ಮಳೆ: ಬೆಂಗಳೂರಿನಲ್ಲಿ ಕೆಲವೆಡೆ ಮಾತ್ರ ವರಣ ಕೃಪೆ ತೋರುವ ಸಾಧ್ಯತೆ- ಐಎಂಡಿ ಅಲರ್ಟ್
- Finance ಮೊಮೊಸ್ ಮಾರುವ ಶಾಪ್ನಿಂದ ಜಾಬ್ ಆಫರ್ ಸಖತ್ ವೈರಲ್! ವೇತನವೆಷ್ಟು ಗೊತ್ತಾ?
- Lifestyle ಬೆಂಗಳೂರಲ್ಲಿ ಮರ ತಬ್ಬಿಕೊಳ್ಳಲು ₹1,500 ಶುಲ್ಕ..! ಇದೇನಿದು ಕಬ್ಬನ್ ಪಾರ್ಕ್ ನಡಿಗೆ..?
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನ.24 ರಂದು ಬೆಂಗಳೂರಿನಲ್ಲಿ 2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ
ಬೆಂಗಳೂರು, ನವೆಂಬರ್ 22: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2017 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನವೆಂಬರ್ 24ರ ಸಂಜೆ 6-00 ಗಂಟೆಗೆ ನಗರದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರ ರಾಷ್ಟ್ರೀಯ ಸಮಾವೇಶ ಭವನ, ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ಆವರಣದಲ್ಲಿ ಏರ್ಪಡಿಸಲಾಗಿದೆ.
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶಸ್ತಿ ಪ್ರದಾನವನ್ನು ಮಾಡಲಿದ್ದಾರೆ. ಸಮಾರಂಭದ ಗೌರವ ಉಪಸ್ಥಿತಿಯನ್ನು ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ.ಸದಾನಂದಗೌಡ, ಉಪ ಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ್ ಅವರು ವಹಿಸಲಿದ್ದಾರೆ.
ಸಂದರ್ಶನ: ಪ್ರಶಸ್ತಿಗಳು ಕಲಾವಿದರ ಬಲ ಹೆಚ್ಚಿಸುತ್ತೆ-ತಾರಾ
ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು ಮುಖ್ಯ ಅತಿಥಿಗಳಾಗಿ ಭಾರಿ ಮತ್ತು ಮಧ್ಯಮ ಕೈಗಾರಿಕೆ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಕೆ.ಜೆ. ಜಾರ್ಜ್, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಡಾ: ಜಯಮಾಲ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪೂಜ್ಯ ಮಹಾ ಪೌರರಾದ ಗಂಗಾಬಿಕೆ ಮಲ್ಲಿಕಾರ್ಜುನ್ ಅವರುಗಳು ಆಗಮಿಸುವರು.
'ಶುದ್ಧಿ'ಗೆ ರಾಜ್ಯ ಪ್ರಶಸ್ತಿ, ಆಸ್ಕರ್ ಸಿಕ್ಕಷ್ಟೇ ಸಂಭ್ರಮ ಪಟ್ಟ ನಿರ್ದೇಶಕ ಆದರ್ಶ್
ವಿಶೇಷ ಆಹ್ವಾನಿತರಾಗಿ ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯರಾದ ಪಿ.ಸಿ.ಮೋಹನ್, ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಿ.ಕೆ. ಸುರೇಶ್ ಅವರುಗಳು ವಿಶೇಷ ಆಹ್ವಾನಿತರಾಗಿರುವರು. ರಾಜ್ಯಸಭಾ ಸದಸ್ಯರುಗಳು, ವಿಧಾನ ಪರಿಷತ್ತಿನ ಸದಸ್ಯರುಗಳು, ವಿಧಾನ ಸಭೆಯ ಶಾಸಕರುಗಳು ಭಾಗವಹಿಸಲಿದ್ದಾರೆ.
2017ನೇ ಸಾಲಿನ ರಾಜ್ಯ ಪ್ರಶಸ್ತಿ ಪ್ರಕಟ: ಸಂಪೂರ್ಣ ಪಟ್ಟಿ ಇಲ್ಲಿದೆ
ಆಹ್ವಾನಿತರಾಗಿ ನಾಗತಿಹಳ್ಳಿ ಚಂದ್ರಶೇಖರ್, ಅಧ್ಯಕ್ಷರು, ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಚಿನ್ನೇಗೌಡ ಅವರು ಉಪಸ್ಥಿತರಿರುವರು.