Don't Miss!
- News PSI Re-Exam: ಪಿಎಸ್ಐ ಮರುಪರೀಕ್ಷೆ ಅಂತಿಮ ಅಂಕಪಟ್ಟಿ ಪ್ರಕಟ: CET ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾ.20ಕ್ಕೆ ಕೋರ್ಟ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾರ್ಚ್ 20ರಂದು ವಿಚಾರಣೆ ಸಲುವಾಗಿ ಮತ್ತೆ ಹೈಕೋರ್ಟ್ಗೆ ಹಾಜರಾಗಬೇಕಿದೆ. ಈ ಹಿಂದೆ ದರ್ಶನ್ ಮೇಲೆ ಅವರ ಪತ್ನಿ ವಿಜಯಲಕ್ಷ್ಮಿ ಹಲ್ಲೆ ಹಾಗೂ ಕಿರುಕುಳ ಆರೋಪ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು. ಈ ಪ್ರಕರಣ ಇಡೀ ದೇಶದ ಗಮನಸೆಳೆದಿತ್ತು. ಬಳಿಕ ಎಲ್ಲವೂ ತಣ್ಣಗಾಗಿತ್ತು.
ಘಟನೆ ನಡೆದ ಸಂದರ್ಭದಲ್ಲಿ ವಿಜಯಲಕ್ಷ್ಮಿ ಅವರು ಪೊಲೀಸರಿಗೂ ದೂರು ನೀಡಿದ್ದರು. ಬಳಿಕ ಕೋರ್ಟ್ನಲ್ಲಿ ಆ ಬಗ್ಗೆ ನನಗೆ ಗೊತ್ತೇ ಇಲ್ಲ ಎಂದಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಲ ದರ್ಶನ್ಗೆ ಜಾಮೀನು ನಿರಾಕರಿಸಿತ್ತು. ಬಳಿಕ ಅವರು ಹೈಕೋರ್ಟ್ಗೆ ಮೊರೆ ಹೋಗಿದ್ದರು.
ದರ್ಶನ್ಗೆ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್ ಜನವರಿ 20ಕ್ಕೆ ಕೋರ್ಟ್ಗೆ ಹಾಜರಾಗುವಂತೆ ಸೂಚಿಸಿತ್ತು. ಆದರೆ ದರ್ಶನ್ ಚಿತ್ರೀಕರಣದಲ್ಲಿ ಬಿಜಿಯಾಗಿರುವ ಕಾರಣ ವಿನಾಯಿತಿ ಕೋರಿದ್ದರು. ಈಗ ಮತ್ತೆ ಕೋರ್ಟ್ಗೆ ಹಾಜರಾಗುವ ಸಾಧ್ಯತೆಗಳಿವೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೂ ಚಾರ್ಚ್ ಶೀಟ್ ದಾಖಲಿಸಿಲ್ಲ. ಮಾರ್ಚ್ 20ರಂದು ಕೋರ್ಟ್ಗೆ ದರ್ಶನ್ ಮತ್ತೆ ಹಾಜರಾಗಬೇಕಾಗಿದೆ ಎಂದು ಮೂಲಗಳು ತಿಳಿಸಿವೆ. ದರ್ಶನ್ ಈಗ ಹಳೆಯದೆಲ್ಲವನ್ನೂ ಮರೆತು ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್ ಜೊತೆ ಹಾಯಾಗಿ ಸಂಸಾರ ನಡೆಸುತ್ತಿರುವುದು ಗೊತ್ತೇ ಇದೆ. (ಏಜೆನ್ಸೀಸ್)