Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಚಂಡ ರಾವಣ ಈ ವಾರ ರಾಜ್ಯದಲ್ಲಿ ತೆರೆಗೆ
ವಜ್ರಮುನಿ ಅವರಿಗೆ ಕೀರ್ತಿತಂದ'ರಾವಣ'ನ ಪಾತ್ರ ನನಗೆ ಸಿಕ್ಕಿದ್ದು ನನ್ನ ಸೌಭಾಗ್ಯ. ಜನರ ನಿರೀಕ್ಷೆಯನ್ನು ಹುಸಿಗೊಳಿಸುವುದಿಲ್ಲ ಎಂಬ ನಂಬಿಕೆ ನನಗೆ ಇದೆ. ಚಿತ್ರ ಚೆನ್ನಾಗಿ ಬಂದಿದೆ ಎಂದು ಡೈನಾಮಿಕ್ ಹೀರೊ ದೇವರಾಜ್ ಸುದ್ದ್ದಿಗಾರರಿಗೆ ಹೇಳಿದರು. ಪ್ರಚಂಡ ರಾವಣ ಚಿತ್ರ ಈವಾರ ರಾಜ್ಯದಲ್ಲಿ ತೆರೆಕಾಣಲು ಸಿದ್ಧವಾಗಿದೆ.
ಪೌರಾಣಿಕ ಚಿತ್ರಕ್ಕೆ ಡಿಜಿಟಲ್ ಸ್ಪರ್ಶನೀಡಲಾಗಿದೆ. ವಸ್ತ್ರವಿನ್ಯಾಸ, ಸೆಟ್ಟಿಂಗ್ ನಲ್ಲೂ ವಿಶೇಷ ಗಮನಹರಿಸಿ ಚಿತ್ರವನ್ನು ತೆಗೆದಿದ್ದೇವೆ. ಜನರಿಗೆ ಚಿತ್ರ ಮೆಚ್ಚುಗೆಯಾಗಲಿದೆ ಎಂಬ ಆಶಾವಾದವನ್ನು ನಿರ್ದೇಶಕ ಪ್ರಸಾದ್ ವ್ಯಕ್ತಪಡಿಸಿದರು. ನಟಿ ರಾಜೇಶ್ವರಿ, ನಿರ್ಮಾಪಕರಾದ ಲೋಕೇಶ್ ಹಾಗೂ ಗಿರೀಶ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿದ್ದರು.
ನನ್ನ ಗುರು ಉದಯ್ ಕುಮಾರ್ ರಾಮಾಂಜನೇಯ ಯುದ್ಧ ಚಿತ್ರದಲ್ಲಿ ಮಾಡಿದ ಆಂಜನೇಯನ ಪಾತ್ರವೇ ನನಗೆ ಸ್ಫೂರ್ತಿಎಂದ ಭರತ್ ಭಾಗವತರ್, ವಿಶೇಷವಾಗಿ ಮಕ್ಕಳಿಗೆ ಆಂಜನೇಯನ ಪಾತ್ರ ಇಷ್ಟವಾಗಲಿದೆ ಎಂದರು.
ಖ್ಯಾತ ಸಾಹಿತಿ ಹಾಗೂ ನಿರ್ದೇಶಕ ಕಣಗಾಲ್ ಪ್ರಭಾಕರ್ ಶಾಸ್ತ್ರಿ ಅವರು ಸೃಷ್ಟಿಸಿದ "ಪ್ರಚಂಡರಾವಣ" ಕೃತಿ. ನಾಟಕ ರೂಪ ತಾಳಿ, ನಟ ವಜ್ರಮುನಿ ಅವರಿಗೆ ಅಪಾರ ಯಶಸ್ಸು, ಕೀರ್ತಿಯನ್ನು ತಂದುಕೊಟ್ಟಿತ್ತು.ಈಗಾಗಲೇ ಜನಮಾನಸದಲ್ಲಿ ಶಾಶ್ವತವಾದ ಸ್ಥಾನ ಪಡೆದ ಈ ಅಮೋಘ ದೃಶ್ಯ ವೈಭವವನ್ನು ಪುನಃ ತೆರೆಗೆ ತರುವುದು ಸಾಹಸವೇ ಸೈ. ಬಹುಶಃ ವಜ್ರಮುನಿ ಅವರು ಇಂದು ನಮ್ಮೊಂದಿಗೆ ಇದ್ದಿದ್ದರೆ ನಾನು ಈ ಪಾತ್ರ ನಿರ್ವಹಿಸಲು ಹಿಂಜರಿಯುತ್ತಿದ್ದೆ. ಆದರೆ ಅಭಿಮಾನಿಗಳ ಆಯ್ಕೆ ನನ್ನ ಕಡೆಗೆ ಸೂಚಿತವಾದದ್ದು ನನ್ನ ಪುಣ್ಯ.(ಎಸ್ ಎಂಎಸ್ ಮೂಲಕ ರಾವಣ ಪಾತ್ರಧಾರಿಯ ಆಯ್ಕೆ ನಡೆದಿದ್ದು ವಿಶೇಷ) ನಿರ್ದೇಶಕ ಪ್ರಸಾದ್ ಹಾಗೂ ಪ್ರಚಂಡ ರಾವಣ ಚಿತ್ರ ತಂಡದ ನಿರಂತರ ಬೆಂಬಲದಿಂದ ನಾನು ಈ ಪಾತ್ರ ಮಾಡಲು ಸಾಧ್ಯವಾಯಿತು ಎಂದು ಪ್ರಾಂಜಲ ಮನಸ್ಸಿನಿಂದ ದೇವರಾಜ್ ಹೇಳಿದರು.
(ದಟ್ಸ್ ಕನ್ನಡ ಸಿನಿ ವಾರ್ತೆ)