Don't Miss!
- Sports SRH vs MI IPL Match: ಹೈಲೈಟ್ಸ್ ನಂತೆ ಕಂಡ ಲೈವ್ ಮ್ಯಾಚ್: ಮುತ್ತಿನ ನಗರಿಯಲ್ಲಿ ಆರ್ಭಟಿಸಿ ಇತಿಹಾಸದ ಪುಟ ಸೇರಿದ SRH
- Lifestyle ಬೆಂಗಳೂರಿಗರೇ... ನೀರಿನ ಕೊರತೆ ತಪ್ಪಿಸಲು ಈ ಟ್ರಿಕ್ಸ್ ಹಾಗೂ ಟಿಪ್ಸ್ ತುಂಬಾನೇ ಪ್ರಯೋಜನಕಾರಿಯಾಗಿದೆ ನೋಡಿ
- News Chitradurga Lok Sabha Constituency: ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ರಾಜಕೀಯ ಹಿನ್ನೆಲೆ ತಿಳಿಯಿರಿ-ಮಾಹಿತಿ, ವಿವರ
- Finance ಐಟಿಆರ್ ಸಲ್ಲಿಸಿದ್ದರೂ, ಆದಾಯ ತೆರಿಗೆ ಇಲಾಖೆಯಿಂದ ನಿಮಗೆ ಇಮೇಲ್ ಬಂದಿದೆಯೇ?
- Automobiles ಜಿಮ್ನಿಗೆ ಸೆಡ್ಡು ಹೊಡೆಯಲು ಎಂಜಿ ಮಾಸ್ಟರ್ ಪ್ಲಾನ್: ಸದ್ಯದಲ್ಲೇ ಕಾಮೆಟ್ ಆಧರಿಸಿ 5 ಡೋರ್ ಕಾರು ಭಾರತಕ್ಕೆ?
- Technology ರೆಡ್ಮಿಯ ಈ ಮೊಬೈಲ್ಗೆ ಇರುವ ಬಿಗ್ ಆಫರ್ ತಿಳಿದ್ರೆ, ಖಂಡಿತಾ ವಾವ್ ಅಂತೀರಾ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪರೀಕ್ಷೆಯಲ್ಲಿ ತೊಂಬತ್ತೇಳರ ಹರೆಯದ ಏಣಗಿ ಬಾಳಪ್ಪ
ಖ್ಯಾತ ರಂಗಭೂಮಿ ಕಲಾವಿದ ಹಾಗೂ ಗಾಯಕ ಏಣಗಿ ಬಾಳಪ್ಪ ಸುದೀರ್ಘ ಸಮಯದ ಬಳಿಕ ನಟಿಸಿದ ಚಿತ್ರ 'ಪರೀಕ್ಷೆ'. ಚಿತ್ರದಲ್ಲಿ ಅಭಿನಯಿಸಿರುವ ಅವರು ಇತ್ತೀಚೆಗೆ ಬೆಳಗಾವಿಯಿಂದ ಬೆಂಗಳೂರಿಗೆ ಬಂದು ಡಬ್ಬಿಂಗ್ ಹೇಳಿದ್ದಾರೆ. ತಮ್ಮ 97ರ ಇಳಿವಯಸ್ಸಿನಲ್ಲೂ ಏಣಗಿ ಬಾಳಪ್ಪ ಅವರ ಕ್ರಿಯಾಶೀಲತೆ ಎಂಥಹವರನ್ನು ಮೂಕವಿಸ್ಮಿತರನ್ನಾಗಿಸುತ್ತದೆ.
'ಪರೀಕ್ಷೆ' ಚಿತ್ರವನ್ನು ರವಿ ಕುಮಾರ್ ಎಂಬುವವರು ನಿರ್ದೇಶಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕ ಸಂಜಯ್ ಪಾಟೀಲ್ ಚಿತ್ರದ ನಿರ್ಮಾಪಕರು. ಕಥಾ ಪ್ರಧಾನವಾದ ಈ ಚಿತ್ರದ ಮುಖ್ಯ ಭೂಮಿಕೆಯಲ್ಲಿ ಅನು ಪ್ರಭಾಕರ್ ಮತ್ತು ಮುನಿ ಅಭಿನಯಿಸಿದ್ದಾರೆ.
ಪ್ರಾಥಮಿಕ ಶಿಕ್ಷಣ, ಭಯಾನಕ ಏಡ್ಸ್ ಕುರಿತು ಶಿಕ್ಷಣ ಮತ್ತು ರೋಗ ನಿರ್ಮೂಲನೆ ಹಾಗೂ ಮಹಿಳಾ ಸ್ವಾವಲಂಭನೆಯಂತಹ ಪ್ರಗತಿಶೀಲ ಘಟನೆಗಳ ಆಧಾರವಾಗಿ ಚಿತ್ರವನ್ನು ತೆರೆಗೆ ತರಲಾಗಿದೆ. ಚಿತ್ರದಲ್ಲಿ ಬಾಳಪ್ಪ ಅವರ ಪಾತ್ರ ಬಹಳ ಪ್ರಾಮುಖ್ಯತೆಯನ್ನು ಹೊಂದಿದೆ ಎಂದು ಚಿತ್ರದ ನಿರ್ದೇಶಕರು ತಿಳಿಸಿದ್ದಾರೆ.
ಚಿತ್ರಕತೆಯನ್ನು ರವಿಕುಮಾರ್ ಅವರು ಹೇಳಿದಾಗ 'ಜಗಜ್ಯೋತಿ ಬಸವೇಶ್ವರ' ನಾಟಕದ ಕೆಲವು ದೃಶ್ಯಗಳ ರೀತಿಯಲ್ಲೇ ಇದೆ ಎನ್ನಿಸಿತು ಎಂದು ಏಣಗಿ ಬಾಳಪ್ಪ ಅಭಿಪ್ರಾಯಪಟ್ಟಿದ್ದಾರೆ. 'ಮಾಡಿ ಮಡಿದವರು' ಹಾಗೂ ವರನಟ ಡಾ.ರಾಜ್ ಕುಮಾರ್ ಅವರ ಕೋರಿಕೆಯ ಮೇರೆಗೆ 'ಜನುಮದ ಜೋಡಿ' ಚಿತ್ರಗಳಲ್ಲಿ ಏಣಗಿ ಬಾಳಪ್ಪ ಅಭಿನಯಿಸಿದ್ದಾರೆ.