Just In
Don't Miss!
- News
ಕರ್ನಾಟಕದಲ್ಲಿ 573 ಕೊರೊನಾ ಸೋಂಕಿತರು ಪತ್ತೆ
- Finance
ಬಜೆಟ್ 2021: ಐ.ಟಿ. ಫೈಲಿಂಗ್ ನಲ್ಲಿ PAN ಕಾರ್ಡ್ ಗೆ ಏಕಿಷ್ಟು ಮಹತ್ವ, ಏನಿದರ ವಿಶೇಷ?
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸಂಗಕ್ಕರ ಬಲ
- Automobiles
ಕರೋಕ್ ಎಸ್ಯುವಿಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಿದೆ ಸ್ಕೋಡಾ
- Lifestyle
ವಾರ ಭವಿಷ್ಯ: 12 ರಾಶಿಗಳ ರಾಶಿ ಫಲ ಹೇಗಿದೆ ನೋಡಿ
- Education
NIT Recruitment 2021: ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬೆಳಗಾವಿ ಸಮ್ಮೇಳನ : ಕನ್ನಡ ಚಿತ್ರರಂಗಕ್ಕೆ ಐದು ದಿನ ರಜೆ
ಮಾರ್ಚ್ 9ರಿಂದ ಮಾರ್ಚ್ 13ರವರೆಗೆ ಚಿತ್ರ ಪ್ರದರ್ಶನ ಹೊರತು ಪಡಿಸಿ ಉಳಿದ ಚಟುವಟಿಕೆಗಳು ಇರುವುದಿಲ್ಲ. ಬೆಳಗಾವಿಯಲ್ಲಿ ಕನ್ನಡ ಸಿನಿಮಾ ತಾರೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ ಈಗಾಗಲೆ ಬೆಂಗಳೂರಿನಲ್ಲಿ ತಾರೆಗಳ ತಾಲೀಮು ನಡೆದಿದೆ ಎಂದು ಬಸಂತ್ ತಿಳಿಸಿದರು.
ಕನ್ನಡ ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಬೆಂಗಳೂರಿನಿಂದಬೆಳಗಾವಿವರೆಗೂ ಸಿನಿಮಾ ತಾರೆಗಳು ಮೆರವಣಿಗೆಯಲ್ಲಿ ಸಾಗಲಿದ್ದಾರೆ. ಬೆಳಗಾವಿಯಲ್ಲಿ ಒಟ್ಟು 1.30 ಗಂಟೆಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಿನಿಮಾ ತಾರೆಗಳು ಹಂಸಲೇಖ ಅವರ ನೇತೃತ್ವದಲ್ಲಿ ನಡೆಸಿಕೊಡಲಿದ್ದಾರೆ ಎಂದರು ಬಸಂತ್.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಾರಾರು ಪಾಲ್ಗೊಳ್ಳಲಿದ್ದಾರೆ ಎಂಬ ವಿವರಗಳನ್ನು ಬಸಂತ್ ಕುಮಾರ್ ಪಾಟೀಲ್ ನೀಡಿಲ್ಲ. ಒಟ್ಟಿನಲ್ಲಿ ಕನ್ನಡ ಚಿತ್ರರಂಗದ ಕಲಾವಿದರು, ಹಂಚಿಕೆದಾರರು, ವಿತರಕರು, ನಿರ್ಮಾಪಕರು, ನಿರ್ದೇಶಕರು ಪಾಲ್ಗೊಳ್ಳಲಿದ್ದಾರೆ ಎಂಬ ವಿವರಗಳನ್ನು ನೀಡಿದರು.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಲು ವಿನಂತಿಸಲಾಗಿದೆ. ಭಾಗವಹಿಸಬೇಕಾದದ್ದು ಅವರ ಧರ್ಮ. ವಿಶ್ವಕನ್ನಡ ಸಮ್ಮೇಳನವನ್ನು ಅವರು ಯಶಸ್ವಿಗೊಳಿಸಬೇಕಾಗಿ ಕೋರುತ್ತಿರುವುದಾಗಿ ನಿರ್ಮಾಪಕ ಸಾ ರಾ ಗೋವಿಂದು ತಿಳಿಸಿದರು. ಸಭೆಯಲ್ಲಿ ಹಂಸಲೇಖ, ಕೆಸಿಎನ್ ಚಂದ್ರಶೇಖರ್, ಕಚಕಾತಂಕ (ಕರ್ನಾಟಕ ಚಲನಚಿತ್ರ ಕಾರ್ಮಿಕರ, ತಂತ್ರಜ್ಞರ, ಕಲಾವಿದರ)ಒಕ್ಕೂಟ ಅಧ್ಯಕ್ಷ ಅಶೋಕ್ ಉಪಸ್ಥಿತರಿದ್ದರು. [ಬೆಳಗಾವಿ ಸಮ್ಮೇಳನ ಲೇಖನಗಳು]