Don't Miss!
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳಗಾವಿ ಸಮ್ಮೇಳನ : ಕನ್ನಡ ಚಿತ್ರರಂಗಕ್ಕೆ ಐದು ದಿನ ರಜೆ
ಮಾರ್ಚ್ 9ರಿಂದ ಮಾರ್ಚ್ 13ರವರೆಗೆ ಚಿತ್ರ ಪ್ರದರ್ಶನ ಹೊರತು ಪಡಿಸಿ ಉಳಿದ ಚಟುವಟಿಕೆಗಳು ಇರುವುದಿಲ್ಲ. ಬೆಳಗಾವಿಯಲ್ಲಿ ಕನ್ನಡ ಸಿನಿಮಾ ತಾರೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ ಈಗಾಗಲೆ ಬೆಂಗಳೂರಿನಲ್ಲಿ ತಾರೆಗಳ ತಾಲೀಮು ನಡೆದಿದೆ ಎಂದು ಬಸಂತ್ ತಿಳಿಸಿದರು.
ಕನ್ನಡ ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಬೆಂಗಳೂರಿನಿಂದಬೆಳಗಾವಿವರೆಗೂ ಸಿನಿಮಾ ತಾರೆಗಳು ಮೆರವಣಿಗೆಯಲ್ಲಿ ಸಾಗಲಿದ್ದಾರೆ. ಬೆಳಗಾವಿಯಲ್ಲಿ ಒಟ್ಟು 1.30 ಗಂಟೆಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಿನಿಮಾ ತಾರೆಗಳು ಹಂಸಲೇಖ ಅವರ ನೇತೃತ್ವದಲ್ಲಿ ನಡೆಸಿಕೊಡಲಿದ್ದಾರೆ ಎಂದರು ಬಸಂತ್.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಾರಾರು ಪಾಲ್ಗೊಳ್ಳಲಿದ್ದಾರೆ ಎಂಬ ವಿವರಗಳನ್ನು ಬಸಂತ್ ಕುಮಾರ್ ಪಾಟೀಲ್ ನೀಡಿಲ್ಲ. ಒಟ್ಟಿನಲ್ಲಿ ಕನ್ನಡ ಚಿತ್ರರಂಗದ ಕಲಾವಿದರು, ಹಂಚಿಕೆದಾರರು, ವಿತರಕರು, ನಿರ್ಮಾಪಕರು, ನಿರ್ದೇಶಕರು ಪಾಲ್ಗೊಳ್ಳಲಿದ್ದಾರೆ ಎಂಬ ವಿವರಗಳನ್ನು ನೀಡಿದರು.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಲು ವಿನಂತಿಸಲಾಗಿದೆ. ಭಾಗವಹಿಸಬೇಕಾದದ್ದು ಅವರ ಧರ್ಮ. ವಿಶ್ವಕನ್ನಡ ಸಮ್ಮೇಳನವನ್ನು ಅವರು ಯಶಸ್ವಿಗೊಳಿಸಬೇಕಾಗಿ ಕೋರುತ್ತಿರುವುದಾಗಿ ನಿರ್ಮಾಪಕ ಸಾ ರಾ ಗೋವಿಂದು ತಿಳಿಸಿದರು. ಸಭೆಯಲ್ಲಿ ಹಂಸಲೇಖ, ಕೆಸಿಎನ್ ಚಂದ್ರಶೇಖರ್, ಕಚಕಾತಂಕ (ಕರ್ನಾಟಕ ಚಲನಚಿತ್ರ ಕಾರ್ಮಿಕರ, ತಂತ್ರಜ್ಞರ, ಕಲಾವಿದರ)ಒಕ್ಕೂಟ ಅಧ್ಯಕ್ಷ ಅಶೋಕ್ ಉಪಸ್ಥಿತರಿದ್ದರು. [ಬೆಳಗಾವಿ ಸಮ್ಮೇಳನ ಲೇಖನಗಳು]