Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ ಮುಂಗಾರುಮಳೆಯಲ್ಲಿ ನೆಂದ ಗಣೇಶ್
'ಮುಂಗಾರು ಮಳೆ' ಹುಡುಗ ಗಣೇಶ್ ಪತ್ನಿ ಶಿಲ್ಪಾ ಅವರು ಆರಂಭಿಸಿರುವ ಸಂಸ್ಥೆ ಗೋಲ್ಡನ್ ಮೂವೀಸ್ ಸಂಸ್ಥೆಯ ಚೊಚ್ಚಲ ಕಾಣಿಕೆ 'ಮಳೆಯಲಿ ಜೊತೆಯಲಿ'.ನಿಸರ್ಗದ ತವರಿನಂತಿರುವ ಸಕಲೇಶಪುರವನ್ನು ಮಳೆಗಾಲದಲ್ಲಿ ನೋಡಬೇಕು. ಮಳೆಯಲ್ಲಿ ಮಿಂದ ಆ ಊರಿನ ಸೌಂದರ್ಯ ಬಣ್ಣಿಸಲು ಅಸಾಧ್ಯ. ಅಂತಹ ರಮಣೀಯ ಸ್ಥಳದಲ್ಲಿ 'ಮಳೆಯಲಿ ಜೊತೆಯಲಿ' ಚಿತ್ರದ ಚಿತ್ರೀಕರಣ ನಡೆಸುತ್ತಿದ್ದಾರೆ.
ನಿರ್ದೇಶಕ ಪ್ರೀತಂ ಗುಬ್ಬಿ. ನಾಯಕ ಗಣೇಶ್ ಹಾಗೂ ನಾಯಕಿಯರಾದ ಅಂಜನಾ ಸುಖಾನಿ, ಯುವಿಕಾ ಚೌಧರಿ ಅವರ ಅಭಿನಯದಲ್ಲಿ ಚಿತ್ರದ ಕೆಲವು ಸನ್ನಿವೇಶ ಹಾಗೂ ಹಲವು ಹಾಡುಗಳು ಈ ಊರಿನಲ್ಲಿ ಚಿತ್ರೀಕರಣಗೊಂಡಿದೆ. ನಿರ್ದೇಶಕರೇ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ಕೃಷ್ಣ ಛಾಯಾಗ್ರಾಹಕರಾಗಿದ್ದಾರೆ.
ವಿ.ಹರಿಕೃಷ್ಣ ಸಂಗೀತ, ದೀಪು ಎಸ್ ಕುಮಾರ್ ಸಂಕಲನ, ದೇವಶೆಟ್ಟಿ ಮಹೇಶ್ ಮತ್ತು ವಿನಾಯಕರಾಮ್ ಕಲಗಾರು ಸಂಭಾಷಣೆ, ಕವಿರಾಜ್, ಜಯಂತ್ ಕಾಯ್ಕಿಣಿ ಗೀತರಚನೆ ಹಾಗೂ ಮೋಹನ್ ಕಲಾ ನಿರ್ದೇಶನವಿರುವ ಚಿತ್ರದ ತಾರಾಬಳಗದಲ್ಲಿ ಗಣೇಶ್, ಅಂಜನಾ ಸುಖಾನಿ, ಯುವಿಕಾ ಚೌಧರಿ, ಸಿಹಿಕಹಿಚಂದ್ರು, ಸಿಹಿಕಹಿಗೀತಾ, ರಂಗಾಯಣ ರಘು, ಶರಣ್, ದತ್ತಣ್ಣ ಮುಂತಾದವರಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)