Don't Miss!
- News ಮನೆ ಬಾಗಿಲಿಗೆ ಹೋದರೂ ಸಿಗಲಿಲ್ಲ ಬಿಜೆಪಿ ಶಾಸಕರು, ಸಂಸದರು: ಉ.ಕನ್ನಡ ಬಿಜೆಪಿ ಅಭ್ಯರ್ಥಿ ಕಾಗೇರಿಗಿಲ್ಲ ಅಸಮಾಧಾನಿತರ ಬೆಂಬಲ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Automobiles ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೋಲ್ಡನ್ ಸ್ಟಾರ್ ಗಣೇಶ್ 'ಮುಂಜಾನೆ'ಗೆ ದಾರಿ ಬಿಡಿ
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಎಸ್ ನಾರಾಯಣ್ ಸಂಗಮದ 'ಮುಂಜಾನೆ' ಚಿತ್ರ ಮುಂದಿನ ತಿಂಗಳು ಮಾರ್ಚ್ ನಲ್ಲಿ ತೆರೆಗೆ ಬರಲು ಸಿದ್ಧವಾಗುತ್ತಿದೆ. ಈಗಾಗಲೇ ಸಾಕಷ್ಟು ಚಿತ್ರಗಳು ಅದೇ ದಿನ ಬಿಡುಗಡೆಯನ್ನು ಘೋಷಿಸಿರುವ ಕಾರಣ, ಈ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗುವ ಸಂಭವ ಇಲ್ಲದಿಲ್ಲ. ಶೈಲೂ ನಂತರ ಗಣೇಶ್-ನಾಣಿ ಮ್ಯಾಜಿಕ್ ಮತ್ತೊಮ್ಮೆ ಪ್ರೇಕ್ಷಕರೆದುರು ಬರುತ್ತಿದೆ.
ಗಣೇಶ್ ಜೊತೆ ನಾಯಕಿಯಾಗಿ ಮಂಜರಿ ಫಡ್ನೀಸ್ ಅಭಿನಯಿಸಿದ್ದಾರೆ. ಮುಂಜಾನೆ ಚಿತ್ರದ ಬಗ್ಗೆ ನಟ ಗಣೇಶ್ ಹಾಗೂ ನಿರ್ದೇಶಕ ನಾರಾಯಣ್ ಇಬ್ಬರಿಗೂ ಬಹಳಷ್ಟು ನಿರೀಕ್ಷೆಗಳಿವೆ. ಕಾರಣ, ಗಣೇಶ್ ಅಮೋಘ ನಟನೆ ಹಾಗೂ ಎಲ್ಲಾ ವಿಭಾಗಗಳಲ್ಲಿ ತೊಡಗಿಸಿಕೊಂಡು ಚಿತ್ರವನ್ನು ಮುಗಿಸಿರುವ ನಾರಾಯಣ್.
ಏನೇ ಆಗಲಿ, ಗಣೇಶ್ ರೇಸ್ ಮೊದಲಿನಂತಿಲ್ಲ. ನಾರಾಯಣ್ ಕೂಡ ಈಗ ಯಶಸ್ವಿ ನಿರ್ದೇಶಕರ ಸಾಲಿನಲ್ಲಿಲ್ಲ. ಆದರೆ ಇತ್ತೀಚಿಗೆ ಬಿಡುಗಡೆಯಾಗಿದ್ದ ಅವರಿಬ್ಬರ ಚಿತ್ರ ಶೈಲೂ ತುಂಬಾ ಚೆನ್ನಾಗಿದೆಯೆಂದು ವಿಮರ್ಶಕರ ಹಾಗೂ ಪ್ರೆಕ್ಷಕರ ಮೆಚ್ಚುಗೆ ಗಳಿಸಿತ್ತೆಂಬುದು ಇಬ್ಬರಿಗೂ ಇರುವ ಏಕೈಕ ಆಸರೆ. ಇದೀಗ ಮುಂಜಾನೆ ಬಿಡುಗಡೆ ಕಾಲ ಸಮೀಪಿಸಿದೆ. ಏನಾಗುತ್ತೋ ಕಾದು ನೋಡಬೇಕಷ್ಟೇ. (ಒನ್ ಇಂಡಿಯಾ ಕನ್ನಡ)