Don't Miss!
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಮ್ಮನ್ನಗಲಿದ 'ತುಷಾರ್ ರಂಗನಾಥ್' ಬಯೋಡಾಟ
ಕನ್ನಡ ಚಿತ್ರರಂಗದಲ್ಲಿ 'ರಾಕ್ಷಸ' ಚಿತ್ರದ ಮೂಲಕ ಚಿತ್ರಕಥೆ ಹಾಗೂ ಸಂಭಾಷಣೆ ನೀಡಿ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿದ ರಂಗನಾಥ್ ಅವರು ಸುಂಟರಗಾಳಿ, ಆಟೊ ಶಂಕರ್, ಮಸ್ತಿ ಸೇರಿದಂತೆ ಹಲವು ಚಿತ್ರಗಳಿಗೆ ಸಂಭಾಷಣೆ ಬರೆದಿದ್ದಾರೆ. ಗುಲಾಮ ಚಿತ್ರದ ಮೂಲಕ ನಿರ್ದೇಶನಕ್ಕೆ ಇಳಿದ ತುಷಾರ್, ಕಂಠೀರವ ಚಿತ್ರ ನಿರ್ದೇಶಿಸಿದ್ದರು. 'ಗಂಗೆ ಬಾರೆ ತುಂಗೆ ಬಾರೆ' ಚಿತ್ರಕ್ಕೆ ಕಥೆ ಹಾಗೂ ಸಂಭಾಷಣೆ ನಿರ್ವಹಿಸಿದ್ದರು.
ತುಷಾರ್ ರಂಗನಾಥ್ ಸಾಹಿತಿ ಕೂಡ. ಅವರು ಬರೆದ ದುನಿಯಾ ಚಿತ್ರದ 'ಪ್ರೀತಿ ಮಾಯೆ ಹುಷಾರು, ಕಣ್ಣೀರ್ ಮಾರೋ ಬಜಾರು' ಹಾಗೂ ಸುಂಟರಗಾಳಿ ಚಿತ್ರದ 'ನನ್ನಾಣೆ ನನ್ನಾಣೆ ಪ್ರೀತಿ ದೇವತೆ ನನ್ನಾಣೆ' ಗೀತೆಗಳು ಬಾರೀ ಜನಮನ್ನಣೆ ಪಡೆದಿದ್ದವು. ಅವರ ಗೀತರಚನೆಯ ಇತರ ಚಿತ್ರಗಳೆಂದರೆ ಇಂತಿ ನಿನ್ನ ಪ್ರೀತಿಯ, ಅನಾಥರು. ಕಳೆದ 12 ವರ್ಷಗಳಿಂದ ಚಿತ್ರರಂಗದಲ್ಲಿದ್ದ ಅವರು ನಿರ್ದೇಶಕ ಸೂರಿ ಹಾಗೂ ಯೋಗರಾಜ್ ಭಟ್ ಟೀಮ್ ನಲ್ಲಿಯೂ ಕೆಲಸ ಮಾಡಿದ್ದರು.
ಸಾಧು ಕೋಕಿಲ, ರಾಮು ನಿರ್ಮಾಣದ ಹಲವು ಚಿತ್ರಗಳಲ್ಲಿ ಅವರು ಕೆಲಸ ಮಾಡಿದ್ದಾರೆ. 'ಗಾಂಧಿ ಕ್ಲಾಸ್' ಎಂಬ ಚಿತ್ರಕ್ಕೆ ಕಥೆ ಸಿದ್ಧಪಡಿಸಿದ್ದ ರಂಗನಾಥ್, ಜನವರಿಯಿಂದ ಚಿತ್ರದ ನಿರ್ದೇಶನ ಆರಂಭಿಸಬೇಕೆಂದಿದ್ದರು. ಎರಡು ವರ್ಷಗಳ ಹಿಂದಿನಿಂದಲೂ ಹೃದಯ ಸಂಬಂಧಿ ಕಾಯಿಲೆಗೆ ಅವರು ಚಿಕಿತ್ಸೆ ಪಡೆಯುತ್ತಿದ್ದರು. ತಾಯಿ, ಹಿರಿಯ ಸೋದರಿ ಹಾಗೂ ಸೋದರನನ್ನು ಅಗಲಿದ್ದಾರೆ ತುಷಾರ್. ಅವರ ಅಕಾಲಿಕ ನಿಧನಕ್ಕೆ ಚಿತ್ರರಂಗದ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ. (ಒನ್ ಇಂಡಿಯಾ ಕನ್ನಡ)