Just In
- 32 min ago
ಸುದೀಪ್ ಗೆ ಸಿನಿಮಾ ನಿರ್ದೇಶನ ಮಾಡುವ ಬಗ್ಗೆ ರಕ್ಷಿತ್ ಶೆಟ್ಟಿ ಹೇಳಿದ್ದೇನು? ಇಲ್ಲಿದೆ ಮಾಹಿತಿ
- 1 hr ago
ಕಂಗನಾ ಮೇಲೆ ಕಥೆ ಕದ್ದ ಆರೋಪ; 72 ಗಂಟೆಯೊಳಗೆ ಉತ್ತರ ನೀಡಬೇಕೆಂದ ಲೇಖಕ
- 2 hrs ago
ಸೋನು ಸೂದ್ ಟೈಲರ್ ಶಾಪ್: ರಸ್ತೆ ಬದಿ ಕುಳಿತು ಬಟ್ಟೆ ಹೊಲಿಯುತ್ತಿರುವ ರಿಯಲ್ ಹೀರೋ
- 3 hrs ago
ಪುನೀತ್ ಸರಳತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪಂಚಮಸಾಲಿ ಸ್ವಾಮೀಜಿ
Don't Miss!
- News
ಪುದುಚೇರಿ ಬಿಜೆಪಿ ಶಾಸಕ, ಖಜಾಂಚಿ ಶಂಕರ್ ನಿಧನ
- Finance
ಜನವರಿ ತಿಂಗಳ ಮೊದಲ 15 ದಿನಗಳಲ್ಲಿ FPI 14,866 ಕೋಟಿ ರು. ಹೂಡಿಕೆ
- Automobiles
ಬೈಕ್ ಸವಾರರೇ ಎಚ್ಚರ: ರೇರ್ ವೀವ್ ಮಿರರ್ ಬಳಸದಿದ್ದರೂ ಬೀಳಲಿದೆ ದಂಡ
- Sports
ಪೂಜಾರ ವಿರುದ್ಧ ಆಸ್ಟ್ರೇಲಿಯಾ ತನ್ನ ಯೋಜನೆಯನ್ನು ಉತ್ತಮವಾಗಿ ಕಾರ್ಯಗತಗೊಳಿಸಿದೆ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ರೀತಿಸಿದ ಹುಡುಗಿ ಜೊತೆ ಸಿನಿಮಾ ನೋಡಿದ್ದೆ ಕೊನೆ
"ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿರಬೇಕಾದರೆ ನಾನು ಸಿನಿಮಾಗಳನ್ನು ಸಿಕ್ಕಾಪಟ್ಟೆ ನೋಡುತ್ತಿದ್ದೆ. ಬಳಿಕ ಅದೇ ಹುಡುಗಿಯನ್ನು ಮದುವೆಯಾದ ಮೇಲೆ ಸಿನಿಮಾಗಳಿಂದ ಕಲಿಯುವುದೇನು ಇಲ್ಲ ಎಂದು ಅನ್ನಿಸಿತು. ಹಾಗಾಗಿ ಚಿತ್ರಗಳನ್ನು ನೋಡುವುದನ್ನು ಬಿಟ್ಟೆ". ಹಾಗಂತ ನಲವತ್ತು ವರ್ಷಗಳ ಹಿಂದಕ್ಕೆ ಹೊರಳಿದವರು ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿ ಸಂತೋಷ್ ಹೆಗಡೆ.
'ಚಿತ್ರ ಸಮೂಹ' ಹಮ್ಮಿಕೊಂಡಿದ್ದ ರಾಷ್ಟ್ರ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಂತೋಷ್ ಹೆಗಡೆ ಅವರು ಮಾತನಾಡುತ್ತಿದ್ದರು. ಅವರು ಹಾಸ್ಯಮಿಶ್ರಿತ ಧಾಟಿಯಲ್ಲಿ ಹೇಳುತ್ತಿದ್ದರೆ ಇಡೀ ಸಭೆ ನಗೆಗಡಲಲ್ಲಿ ತೇಲುತ್ತಿತ್ತು. ಸಿನಿಮಾಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ ಸಿನಿಮಾಗಳಿಗೆ ನನ್ನ ಬೆಂಬಲವಿದೆ. ನಾನು ನೋಡಿದ ಕೊನೆಯ ಚಿತ್ರ 'ಇಷ್ಕ್ ಪರ್ ಜೋರ್'. ಸಿಟಿ ಮಾರುಕಟ್ಟೆಯಲ್ಲಿರುವ ಅಪ್ಸರಾ ಚಿತ್ರಮಂದಿರಲ್ಲಿ ನಲವತ್ತು ವರ್ಷಗಳ ಹಿಂದೆ ನೋಡಿದ ಚಿತ್ರವದು ಎಂದರು.
ನಿತ್ಯೋತ್ಸವ ಕವಿ ಡಾ.ನಿಸಾರ್ ಅಹ್ಮದ್ ಮಾತನಾಡುತ್ತಾ, ಗಿರೀಶ್ ಕಾಸರವಳ್ಳಿ ಅವರ 'ಹಸೀನಾ' ಚಿತ್ರವನ್ನು ನೋಡಿದ್ದೇನೆ. ಅದರಲ್ಲಿನ ಕೆಲವೊಂದು ದೃಶ್ಯಗಳು ಅದ್ಭುತವಾಗಿವೆ. ಹಾಗೆಯೇ 'ಘಟ ಶ್ರಾದ್ಧ' ಚಿತ್ರ ಸಹ ಅತ್ಯುತ್ತಮವಾಗಿದೆ. ಅಂದಿನಿಂದಲೂ ಗಿರೀಶ್ ಹೊಸ ಅಲೆಯ ಚಿತ್ರಗಳನ್ನು ನಿರ್ದೇಶಿಸುತ್ತಲೆ ಬರುತ್ತಿದ್ದಾರೆ. ಅವರ ಚಿತ್ರಗಳಲ್ಲಿ ಸಂವೇದನಾಶೀಲತೆ, ಸೂಚ್ಯತೆ ಇರುವುದರಿಂದ ಅವು ಶ್ರೇಷ್ಠ ಚಿತ್ರಗಳಾಗಿ ನಿಲ್ಲುತ್ತವೆ ಎಂದರು.
ಪೋಷಕ ನಟಿ ಪ್ರಶಸ್ತಿಗೆ ಆಯ್ಕೆಯಾದ ಅರುಂಧತಿ ನಾಗ್, ನಾನು 35 ವರ್ಷಗಳಿಂದಲೂ ರಂಗಭೂಮಿಯಲ್ಲಿದ್ದೇನೆ. ಈ ಪ್ರಶಸ್ತಿ ನನಗೆ ಖುಷಿ ತಂದಿದೆ. ಅಮಿತಾಬ್ ಜೊತೆ ನಟಿಸಿದ್ದು ಮರೆಯದ ಅನುಭವ. ಪ್ರಶಸ್ತಿ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದರು.
'ಸಿನಿಮಾ ಯಾನ' ಪುಸ್ತಕಕ್ಕೆ ಸ್ವರ್ಣ ಕಮಲ ಪಡೆದ ಡಾ.ಕೆ.ಪುಟ್ಟಸ್ವಾಮಿ ಮತನಾಡುತ್ತಾ, ಇದು ಸಿನಿಮಾ ಕುರಿತ ಚರಿತ್ರೆಯ ಪುಸ್ತಕವಂತೂ ಅಲ್ಲ. ಇದರಲ್ಲಿ ಎಲ್ಲವೂ ಸಮಗ್ರವಾಗಿಲ್ಲ. ಕನ್ನಡ ಚಿತ್ರರಂಗದ ಬಗ್ಗೆ ಸಣ್ಣ ಅವಲೋಕನ ಮಾಡಿದ್ದಕ್ಕೆ ದೊಡ್ಡ ಪ್ರಶಸ್ತಿ ಸಿಕ್ಕಿರುವುದು ಸಂತಸ ತಂದಿದೆ ಎಂದರು.
ಪ್ರಶಸ್ತಿ ನಿರೀಕ್ಷಿಸಿರಲಿಲ್ಲ. ಒಂದು ಸಣ್ಣ ಎಳೆ ಇಟ್ಟುಕೊಂಡು ಮಾಡಿದ ಸಣ್ಣ ಚಿತ್ರಕ್ಕೆ ಈ ಪ್ರಶಸ್ತಿ ಬಂದಿರುವುದು ಸಂತಸ ತಂದಿದೆ. ಮತ್ತಷ್ಟು ಉತ್ಸಾಹ ಹೆಚ್ಚಿಸಿದೆ ಎಂದು 'ಪುಟಾಣಿ ಪಾರ್ಟಿ' ಚಿತ್ರದ ನಿರ್ದೇಶಕ ಪಿ ಎನ್ ರಾಮಚಂದ್ರ ಹೇಳಿದರು. ಕನಸೆಂಬ ಕುದುರೆಯನೇರಿ ಚಿತ್ರದ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ ಪಡೆದ ಗೋಪಾಲ ಕೃಷ್ಣ ಪೈ ಹಾಗೂ ನಿರ್ಮಾಪಕ ಬಸಂತಕುಮಾರ್ ಪಾಟೀಲ್ ಸಹ ಉಪಸ್ಥಿತರಿದ್ದರು.