Don't Miss!
- News Dwarakish: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ದ್ವಾರಕೀಶ್ ಪಡೆದಿದ್ದ ಮತಗಳೆಷ್ಟು?
- Sports KKR vs RR IPL 2024: ಸುನಿಲ್ ನರೈನ್ ಚೊಚ್ಚಲ ಐಪಿಎಲ್ ಶತಕ; ರಾಜಸ್ಥಾನ್ಗೆ ಬೃಹತ್ ಗುರಿ ನೀಡಿದ ಕೋಲ್ಕತ್ತಾ
- Automobiles ಪೆಟ್ರೋಲ್ ಎಂಜಿನ್ಗಳಲ್ಲಿ ಮಾತ್ರ ಬರಲಿದೆ ರೆನಾಲ್ಟ್ನ ಬ್ರಹ್ಮಾಸ್ತ್ರ ಡಸ್ಟರ್
- Lifestyle ಸೌದಿಯಲ್ಲಿ ಮಳೆ, ಪ್ರವಾಹ...ಮರುಭೂಮಿ ಮರೆಯಾಗಿ ನಳನಳಿಸುವ ಹಸಿರು...! ಇದು ಹೇಗೆ ಸಾಧ್ಯ ಗೊತ್ತಾ?
- Finance ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಷೇರು ಪೇಟೆಯಲ್ಲಿ ಭಾರಿ ನಷ್ಟ
- Technology YouTube: ಯೂಟ್ಯೂಬ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್! ಆಡ್ ಬ್ಲಾಕರ್ ವಿರುದ್ಧ ಸಮರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರೀತಿಸಿದ ಹುಡುಗಿ ಜೊತೆ ಸಿನಿಮಾ ನೋಡಿದ್ದೆ ಕೊನೆ
"ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿರಬೇಕಾದರೆ ನಾನು ಸಿನಿಮಾಗಳನ್ನು ಸಿಕ್ಕಾಪಟ್ಟೆ ನೋಡುತ್ತಿದ್ದೆ. ಬಳಿಕ ಅದೇ ಹುಡುಗಿಯನ್ನು ಮದುವೆಯಾದ ಮೇಲೆ ಸಿನಿಮಾಗಳಿಂದ ಕಲಿಯುವುದೇನು ಇಲ್ಲ ಎಂದು ಅನ್ನಿಸಿತು. ಹಾಗಾಗಿ ಚಿತ್ರಗಳನ್ನು ನೋಡುವುದನ್ನು ಬಿಟ್ಟೆ". ಹಾಗಂತ ನಲವತ್ತು ವರ್ಷಗಳ ಹಿಂದಕ್ಕೆ ಹೊರಳಿದವರು ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿ ಸಂತೋಷ್ ಹೆಗಡೆ.
'ಚಿತ್ರ ಸಮೂಹ' ಹಮ್ಮಿಕೊಂಡಿದ್ದ ರಾಷ್ಟ್ರ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಂತೋಷ್ ಹೆಗಡೆ ಅವರು ಮಾತನಾಡುತ್ತಿದ್ದರು. ಅವರು ಹಾಸ್ಯಮಿಶ್ರಿತ ಧಾಟಿಯಲ್ಲಿ ಹೇಳುತ್ತಿದ್ದರೆ ಇಡೀ ಸಭೆ ನಗೆಗಡಲಲ್ಲಿ ತೇಲುತ್ತಿತ್ತು. ಸಿನಿಮಾಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ ಸಿನಿಮಾಗಳಿಗೆ ನನ್ನ ಬೆಂಬಲವಿದೆ. ನಾನು ನೋಡಿದ ಕೊನೆಯ ಚಿತ್ರ 'ಇಷ್ಕ್ ಪರ್ ಜೋರ್'. ಸಿಟಿ ಮಾರುಕಟ್ಟೆಯಲ್ಲಿರುವ ಅಪ್ಸರಾ ಚಿತ್ರಮಂದಿರಲ್ಲಿ ನಲವತ್ತು ವರ್ಷಗಳ ಹಿಂದೆ ನೋಡಿದ ಚಿತ್ರವದು ಎಂದರು.
ನಿತ್ಯೋತ್ಸವ ಕವಿ ಡಾ.ನಿಸಾರ್ ಅಹ್ಮದ್ ಮಾತನಾಡುತ್ತಾ, ಗಿರೀಶ್ ಕಾಸರವಳ್ಳಿ ಅವರ 'ಹಸೀನಾ' ಚಿತ್ರವನ್ನು ನೋಡಿದ್ದೇನೆ. ಅದರಲ್ಲಿನ ಕೆಲವೊಂದು ದೃಶ್ಯಗಳು ಅದ್ಭುತವಾಗಿವೆ. ಹಾಗೆಯೇ 'ಘಟ ಶ್ರಾದ್ಧ' ಚಿತ್ರ ಸಹ ಅತ್ಯುತ್ತಮವಾಗಿದೆ. ಅಂದಿನಿಂದಲೂ ಗಿರೀಶ್ ಹೊಸ ಅಲೆಯ ಚಿತ್ರಗಳನ್ನು ನಿರ್ದೇಶಿಸುತ್ತಲೆ ಬರುತ್ತಿದ್ದಾರೆ. ಅವರ ಚಿತ್ರಗಳಲ್ಲಿ ಸಂವೇದನಾಶೀಲತೆ, ಸೂಚ್ಯತೆ ಇರುವುದರಿಂದ ಅವು ಶ್ರೇಷ್ಠ ಚಿತ್ರಗಳಾಗಿ ನಿಲ್ಲುತ್ತವೆ ಎಂದರು.
ಪೋಷಕ ನಟಿ ಪ್ರಶಸ್ತಿಗೆ ಆಯ್ಕೆಯಾದ ಅರುಂಧತಿ ನಾಗ್, ನಾನು 35 ವರ್ಷಗಳಿಂದಲೂ ರಂಗಭೂಮಿಯಲ್ಲಿದ್ದೇನೆ. ಈ ಪ್ರಶಸ್ತಿ ನನಗೆ ಖುಷಿ ತಂದಿದೆ. ಅಮಿತಾಬ್ ಜೊತೆ ನಟಿಸಿದ್ದು ಮರೆಯದ ಅನುಭವ. ಪ್ರಶಸ್ತಿ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದರು.
'ಸಿನಿಮಾ ಯಾನ' ಪುಸ್ತಕಕ್ಕೆ ಸ್ವರ್ಣ ಕಮಲ ಪಡೆದ ಡಾ.ಕೆ.ಪುಟ್ಟಸ್ವಾಮಿ ಮತನಾಡುತ್ತಾ, ಇದು ಸಿನಿಮಾ ಕುರಿತ ಚರಿತ್ರೆಯ ಪುಸ್ತಕವಂತೂ ಅಲ್ಲ. ಇದರಲ್ಲಿ ಎಲ್ಲವೂ ಸಮಗ್ರವಾಗಿಲ್ಲ. ಕನ್ನಡ ಚಿತ್ರರಂಗದ ಬಗ್ಗೆ ಸಣ್ಣ ಅವಲೋಕನ ಮಾಡಿದ್ದಕ್ಕೆ ದೊಡ್ಡ ಪ್ರಶಸ್ತಿ ಸಿಕ್ಕಿರುವುದು ಸಂತಸ ತಂದಿದೆ ಎಂದರು.
ಪ್ರಶಸ್ತಿ ನಿರೀಕ್ಷಿಸಿರಲಿಲ್ಲ. ಒಂದು ಸಣ್ಣ ಎಳೆ ಇಟ್ಟುಕೊಂಡು ಮಾಡಿದ ಸಣ್ಣ ಚಿತ್ರಕ್ಕೆ ಈ ಪ್ರಶಸ್ತಿ ಬಂದಿರುವುದು ಸಂತಸ ತಂದಿದೆ. ಮತ್ತಷ್ಟು ಉತ್ಸಾಹ ಹೆಚ್ಚಿಸಿದೆ ಎಂದು 'ಪುಟಾಣಿ ಪಾರ್ಟಿ' ಚಿತ್ರದ ನಿರ್ದೇಶಕ ಪಿ ಎನ್ ರಾಮಚಂದ್ರ ಹೇಳಿದರು. ಕನಸೆಂಬ ಕುದುರೆಯನೇರಿ ಚಿತ್ರದ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ ಪಡೆದ ಗೋಪಾಲ ಕೃಷ್ಣ ಪೈ ಹಾಗೂ ನಿರ್ಮಾಪಕ ಬಸಂತಕುಮಾರ್ ಪಾಟೀಲ್ ಸಹ ಉಪಸ್ಥಿತರಿದ್ದರು.