Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರೀತಿಯಿಂದ ರಮೇಶ್ ಜತೆ ರಮನೀತೋ ಚೌದರಿ
ಕಸ್ತೂರಿ ವಾಹಿನಿಯಲ್ಲಿ ನಟ ರಮೇಶ್ ಅರವಿಂದ್ ನಡೆಸಿಕೊಡುತ್ತಿರುವ 'ಪ್ರೀತಿಯಿಂದ ರಮೇಶ್' ಕಾರ್ಯಕ್ರಮ ಇದೀಗ ಚಿತ್ರದ ಶೀರ್ಷಿಕೆಯಾಗಿ ಬದಲಾಗಿದೆ. ಈ ಚಿತ್ರದ ನಾಯಕ ನಟ ಸಹ ರಮೇಶ್ ಅವರೇ ಎಂಬುದು ವಿಶೇಷ. ಪ್ರೀತಿಯಿಂದ ರಮೇಶ್ ಕಾರ್ಯಕ್ರಮ ಕಸ್ತೂರಿ ವಾಹಿನಿಯಲ್ಲಿ 100 ಕಂತುಗಳನ್ನು ಪೂರೈಸಿದೆ ಸಹ.
ಜನಪ್ರಿಯ ನಟನೊಬ್ಬ ನಿರೂಪಿಸಿದ ಕಾರ್ಯಕ್ರಮವೊಂದು ಚಿತ್ರದ ಶೀರ್ಷಿಕೆಯಾಗುತ್ತಿರುವುದು ಕನ್ನಡದ ಮಟ್ಟಿಗೆ ಇದೇ ಮೊದಲು. ರಮನೀತೋ ಚೌದರಿ, ಕಿರಣ್, ಅನಂತನಾಗ್ ಈ ಚಿತ್ರದ ಮುಖ್ಯ ಪಾತ್ರಧಾರಿಗಳು. ಎನ್ ರವಿಕುಮಾರ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಶಾಂತಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಅವರು ನಿರ್ಮಿಸುತ್ತಿರುವ 15 ಕನ್ನಡ ಚಿತ್ರ ಇದಾಗಿದೆ.
ರೋಮಿಯೋ ಜ್ಯೂಲಿಯಟ್, ಬೈತಾರೆ ಬೈತಾರೆ ಮತ್ತು ಹ್ಯಾಪಿ ನ್ಯೂ ಇಯರ್ ನಿರ್ದೇಶಿಸಿದ್ದ ಗುಣಕುಮಾರ್ ಆಕ್ಷನ್, ಕಟ್ ಹೇಳಲಿದ್ದಾರೆ. ಈ ಚಿತ್ರಕ್ಕೆ ಅವರೇ ಕತೆ, ಚಿತ್ರಕತೆಯನ್ನೂ ರಚಿಸಿದ್ದಾರೆ. ಐದು ಹಾಡುಗಳುಳ್ಳ ಪ್ರೀತಿಯಿಂದ ರಮೇಶ್ ಚಿತ್ರಕ್ಕೆ ಎ ಟಿ ರವೀಶ್ ಸಂಗೀತ ಸಂಯೋಜನೆ ಇದೆ. ಛಾಯಾಗ್ರಹಣ ಎ ಸಿ ಮಹೇಂದ್ರ. ರವಿ ಸಂಕಲನ, ವಿಜಯ್ಪ್ರಸಾದ್ ಸಂಭಾಷಣೆ, ಟೈಗರ್ ಮಧು, ಕೆ.ಕಲ್ಯಾಣ್, ನಾಗೇಂದ್ರ ಪ್ರಸಾದ್ ಹಾಗೂ ಶಿವನಂಜೇಗೌಡರ ಗೀತರಚನೆಯಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)