Don't Miss!
- News ಲೋಕಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರೀತಿಯಿಂದ ರಮೇಶ್ ಜತೆ ರಮನೀತೋ ಚೌದರಿ
ಕಸ್ತೂರಿ ವಾಹಿನಿಯಲ್ಲಿ ನಟ ರಮೇಶ್ ಅರವಿಂದ್ ನಡೆಸಿಕೊಡುತ್ತಿರುವ 'ಪ್ರೀತಿಯಿಂದ ರಮೇಶ್' ಕಾರ್ಯಕ್ರಮ ಇದೀಗ ಚಿತ್ರದ ಶೀರ್ಷಿಕೆಯಾಗಿ ಬದಲಾಗಿದೆ. ಈ ಚಿತ್ರದ ನಾಯಕ ನಟ ಸಹ ರಮೇಶ್ ಅವರೇ ಎಂಬುದು ವಿಶೇಷ. ಪ್ರೀತಿಯಿಂದ ರಮೇಶ್ ಕಾರ್ಯಕ್ರಮ ಕಸ್ತೂರಿ ವಾಹಿನಿಯಲ್ಲಿ 100 ಕಂತುಗಳನ್ನು ಪೂರೈಸಿದೆ ಸಹ.
ಜನಪ್ರಿಯ ನಟನೊಬ್ಬ ನಿರೂಪಿಸಿದ ಕಾರ್ಯಕ್ರಮವೊಂದು ಚಿತ್ರದ ಶೀರ್ಷಿಕೆಯಾಗುತ್ತಿರುವುದು ಕನ್ನಡದ ಮಟ್ಟಿಗೆ ಇದೇ ಮೊದಲು. ರಮನೀತೋ ಚೌದರಿ, ಕಿರಣ್, ಅನಂತನಾಗ್ ಈ ಚಿತ್ರದ ಮುಖ್ಯ ಪಾತ್ರಧಾರಿಗಳು. ಎನ್ ರವಿಕುಮಾರ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಶಾಂತಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಅವರು ನಿರ್ಮಿಸುತ್ತಿರುವ 15 ಕನ್ನಡ ಚಿತ್ರ ಇದಾಗಿದೆ.
ರೋಮಿಯೋ ಜ್ಯೂಲಿಯಟ್, ಬೈತಾರೆ ಬೈತಾರೆ ಮತ್ತು ಹ್ಯಾಪಿ ನ್ಯೂ ಇಯರ್ ನಿರ್ದೇಶಿಸಿದ್ದ ಗುಣಕುಮಾರ್ ಆಕ್ಷನ್, ಕಟ್ ಹೇಳಲಿದ್ದಾರೆ. ಈ ಚಿತ್ರಕ್ಕೆ ಅವರೇ ಕತೆ, ಚಿತ್ರಕತೆಯನ್ನೂ ರಚಿಸಿದ್ದಾರೆ. ಐದು ಹಾಡುಗಳುಳ್ಳ ಪ್ರೀತಿಯಿಂದ ರಮೇಶ್ ಚಿತ್ರಕ್ಕೆ ಎ ಟಿ ರವೀಶ್ ಸಂಗೀತ ಸಂಯೋಜನೆ ಇದೆ. ಛಾಯಾಗ್ರಹಣ ಎ ಸಿ ಮಹೇಂದ್ರ. ರವಿ ಸಂಕಲನ, ವಿಜಯ್ಪ್ರಸಾದ್ ಸಂಭಾಷಣೆ, ಟೈಗರ್ ಮಧು, ಕೆ.ಕಲ್ಯಾಣ್, ನಾಗೇಂದ್ರ ಪ್ರಸಾದ್ ಹಾಗೂ ಶಿವನಂಜೇಗೌಡರ ಗೀತರಚನೆಯಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)