Don't Miss!
- News karnataka Rain: ಇಂದಿನಿಂದ ರಾಜ್ಯದಲ್ಲಿ ಜೋರು ಮಳೆ: ಬೆಂಗಳೂರಿನಲ್ಲಿ ಕೆಲವೆಡೆ ಮಾತ್ರ ವರಣ ಕೃಪೆ ತೋರುವ ಸಾಧ್ಯತೆ- ಐಎಂಡಿ ಅಲರ್ಟ್
- Finance ಮೊಮೊಸ್ ಮಾರುವ ಶಾಪ್ನಿಂದ ಜಾಬ್ ಆಫರ್ ಸಖತ್ ವೈರಲ್! ವೇತನವೆಷ್ಟು ಗೊತ್ತಾ?
- Lifestyle ಬೆಂಗಳೂರಲ್ಲಿ ಮರ ತಬ್ಬಿಕೊಳ್ಳಲು ₹1,500 ಶುಲ್ಕ..! ಇದೇನಿದು ಕಬ್ಬನ್ ಪಾರ್ಕ್ ನಡಿಗೆ..?
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪೂಜಾಗಾಂಧಿ ಬೆತ್ತಲೆ ಪೋಸ್ಟರ್ ವಿರುದ್ಧ ಪ್ರತಿಭಟನೆ
ನಟಿ ಪೂಜಾಗಾಂಧಿ ಅಭಿನಯದ 'ದಂಡುಪಾಳ್ಯ' ಚಿತ್ರದ ಅರೆ ಬೆತ್ತಲೆ ಪೋಸ್ಟರ್ಗಳನ್ನು ವಿರೋಧಿಸಿ ಇಂದು ಶನಿವಾರ (ಜ.21) ಅಂಬೇಡ್ಕರ್ ಕ್ರಾಂತಿ ಸೇನೆ ಪ್ರತಿಭಟನೆ ನಡೆಸಿತು. ಸಂಘದ ಕಾರ್ಯಕರ್ತರು ಕರ್ನಾಟಕ ಫಿಲಂ ಚೇಂಬರ್ ಮುಂದೆ ಕುಳಿತು ಚಿತ್ರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು.
'ದಂಡುಪಾಳ್ಯ' ಚಿತ್ರದಲ್ಲಿನ ಪೋಸ್ಟರ್ಗಳು ಅಶ್ಲೀಲವಾಗಿದ್ದು ಮಹಿಳೆಯರಿಗೆ ಅವಮಾನ ಮಾಡಲಾಗಿದೆ. ಪೂಜಾಗಾಂಧಿ ಅವರನ್ನು ಕರ್ನಾಟಕಕ್ಕೆ ಬಂದ ನಟಿ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ಅವರು ಈ ರೀತಿಯ ಚಿತ್ರಗಳಲ್ಲಿ ಅಭಿನಯಿಸುವ ಮೂಲಕ ಅವರ ಮೇಲಿನ ಅಭಿಮಾನಕ್ಕೆ ಧಕ್ಕೆ ತಂದಿದ್ದಾರೆ. ತಮ್ಮ ಘನತೆಗೆ ತಕ್ಕ ಪಾತ್ರಗಳನ್ನು ಪೋಷಿಸಲಿ ಎಂದು ಸಂಘದ ಕಾರ್ಯಕರ್ತರು ಪ್ರತಿಕ್ರಿಯಿಸಿದರು.
ಪೂಜಾಗಾಂಧಿ ಅಭಿನಯದ 'ದಂಡುಪಾಳ್ಯ' ಚಿತ್ರ ಈಗಾಗಲೆ ಕತೆ ಕದ್ದ ಆರೋಪಕ್ಕೆ ಗುರಿಯಾಗಿದೆ. ಇದರ ನಡುವೆ ಚಿತ್ರದ ವಿರುದ್ಧ ಪ್ರತಿಭಟನೆ ನಡೆದಿರುವುದು ಮತ್ತೊಂದು ಬೆಳವಣಿಗೆ. ಆದರೆ ಪೂಜಾಗಾಂಧಿ ಮಾತ್ರ ಇದ್ಯಾವುದಕ್ಕೂ ಕೇರ್ ಮಾಡುತ್ತಿಲ್ಲ. ತಮ್ಮ ಪಾತ್ರಕ್ಕೆ ತಾವು ನ್ಯಾಯ ಸಲ್ಲಿಸಿದ್ದೇವೆ ಎಂದಷ್ಟೇ ಹೇಳಿದ್ದಾರೆ. (ಒನ್ಇಂಡಿಯಾ ಕನ್ನಡ)