Don't Miss!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- News ಗೃಹ ಸಚಿವ ಡಾ. ಜಿ ಪರಮೇಶ್ವರ್ ರಾಜೀನಾಮೆಗೆ ಆಗ್ರಹ: ಕಾರಣವೇನು?
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಚಿತ್ರರಂಗಕ್ಕೆ ಎಸ್ ನಾರಾಯಣ್ ಗುಡ್ ಬೈ
"ಜನ ನನ್ನನ್ನು ಸ್ವೀಕರಿಸುತ್ತಿಲ್ಲ. ಚಿತ್ರರಂಗವನ್ನು ನಂಬಿ ಸಾಕಷ್ಟು ಹಣ ಕಳೆದುಕೊಂಡಿದ್ದೇನೆ. ಇನ್ನು ಮುಂದೆ ಯಾವುದೇ ಚಿತ್ರಗಳನ್ನು ನಿರ್ದೇಶಿಸುವುದಿಲ್ಲ ಹಾಗೂ ನಿರ್ಮಿಸುವುದಿಲ್ಲ. ಆದರೆ ಯಾರಾದರು ಚಾನ್ಸ್ ಕೊಟ್ಟರೆ ಪಾತ್ರ ಮಾಡುತ್ತೇನೆ" ಎಂದಿದ್ದಾರೆ.
ಎಸ್ ನಾರಾಯಣ್ ಚಿತ್ರ ನಿರ್ಮಾಣ, ನಿರ್ದೇಶನ, ಸಂಗೀತ ನಿರ್ದೇಶನ, ಗೀತಸಾಹಿತ್ಯ, ಗಾಯನ ಹೀಗೆ ಹಲವಾರು ವಿಭಾಗಗಳಲ್ಲಿ ಕೈಯಾಡಿಸಿದವರು. ಹೀಗೆ ಮಾಡಿದ ಕಾರಣಕ್ಕೋ ಏನೋ ಅವರ ಪ್ರತಿಭೆ ಕೂಡ ಹರಿದು ಹಂಚಿಹೋಗಿತ್ತು.
ನಾರಾಯಣ್ ಏಕಾಏಕಿ ಈ ರೀತಿ ದುಡುಕಿ ನಿರ್ಧಾರ ತೆಗೆದುಕೊಳ್ಳಬಾರದಿತ್ತು. ತಮ್ಮ ಸತತ ಸೋಲಿಗೆ ಕಾರಣ ಏನು ಎಂದು ಹುಡುಕಬೇಕಿತ್ತು. ಆಗ ಅವರ ಅರ್ಧ ಸಮಸ್ಯೆ ಪರಿಹಾರವಾಗುತ್ತಿತ್ತು ಎಂದು ನಾಣಿ ಅಭಿಮಾನಿಗಳು ಅವರಿಗೆ ಹಿತವಚನ ಹೇಳಿದ್ದಾರೆ. ಆದರೆ ನಾಣಿ ಮಾತ್ರ ಯಾವುದೇ ಕಾರಣಕ್ಕೂ ತಮ್ಮ ಮನಸ್ಸು ಬದಲಾಯಿಸಿಕೊಳ್ಳಲ್ಲ ಎಂದಿದ್ದಾರೆ.
ಚೌಡಯ್ಯ, ಲಕ್ಷ್ಮಿ ನರಸಿಂಹ, ದೊಡ್ ಮನುಷ್ಯ, ನೆನಪಿದೆಯಾ ಓ ಗೆಳತಿ, ದಾಂಡಿಗ ಚಿತ್ರಗಳನ್ನು ನಾಣಿ ನಿರ್ದೇಶಿಸುತ್ತಿದ್ದಾರೆ. ಈಗ ಸಡನ್ ಆಗಿ ನಿವೃತ್ತಿ ಘೋಷಿಸಿದ ಕಾರಣ ಈ ಚಿತ್ರಗಳ ಭವಿಷ್ಯವೂ ತೂಗುಯ್ಯಾಲೆಯಲ್ಲಿದೆ. ಇನ್ನು ಮುಂದೆ ನಟನಾಗಿ ಜನ ಅವರನ್ನು ಎಷ್ಟರ ಮಟ್ಟಿಗೆ ಸ್ವೀಕರಿಸುತ್ತಾರೆ ಎಂಬ ಪ್ರಶ್ನೆಯೂ ತಲೆ ಎತ್ತಿದೆ. (ಒನ್ಇಂಡಿಯಾ ಕನ್ನಡ)