Don't Miss!
- News India Rain: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆ, ಹಿಮಪಾತ ಸಾಧ್ಯತೆ: ಭಾರತದ ಈ ಭಾಗದಲ್ಲಿ ತಂಪೆರೆಯಲಿರುವ ವರುಣ
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜ್ಯೋತಿಷಿ ಸಲಹೆ ಮೇರೆಗೆ ಕುಕ್ಕೆಗೆ ನಟ ದರ್ಶನ್ ಭೇಟಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್ರೊಂದಿಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಶ್ರೀದೇವರ ದರ್ಶನ ಭಾಗ್ಯ ಪಡೆದರು. ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ಅವರ ಆಶೀರ್ವಚನ ಪಡೆದು ಬಳಿಕ ಅವರು ಅಳದಂಗಡಿ ಶ್ರೀಸೋಮೇಶ್ವರನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು.
ಅಲ್ಲಿ ಹೆಚ್ಚು ಸಮಯ ಕಳೆಯದೆ ದೇವಿಯ ಹಾಗೂ ಗಣೇಶನ ದರ್ಶನ ಪಡೆದು ತರಾತುರಿಯಲ್ಲಿ ಪೂಜೆ ಮುಗಿಸಿ ಐದೇ ನಿಮಿಷಕ್ಕೆ ಅಲ್ಲಿಂದ ಹೊರಟರು. ಇತ್ತೀಚೆಗಷ್ಟೇ ದರ್ಶನ್ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಮುಡಿ ಸಪರ್ಪಿಸಿದ್ದರು.
ಈಗ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ತಮ್ಮ ಹರಕೆ ಸಲ್ಲಿಸಿದ್ದಾರೆ. ಜ್ಯೋತಿಷಿಯೊಬ್ಬರ ಸಲಹೆ ಮೇರೆಗೆ ದರ್ಶನ್ ಅಳದಂಗಡಿಗೆ ಭೇಟಿ ನೀಡಿದ್ದಾಗಿ ತಿಳಿದುಬಂದಿದೆ. ಆದರೆ ದರ್ಶನ್ ಅವರನ್ನು ಭೇಟಿ ಮಾಡಲು ಅವರ ಅಪಾರ ಅಭಿಮಾನಿ ಬಳಗಕ್ಕೆ ಸಾಧ್ಯವಾಗಲಿಲ್ಲ. ಅವರು ಅಲ್ಲಿಂದ ಶೀಘ್ರವಾಗಿ ಹೊರಟುಬಿಟ್ಟರು.
ದೇವಳದ ಆಡಳಿತ ಮೊಕ್ತೇಸರ ಡಾ.ಪದ್ಮಪ್ರಸಾದ ಅಜಿಲ ಹಾಗೂ ಸತ್ಯ ದೇವತೆ ದೇವಳದ ಶಿವಪ್ರಸಾದ ಅಜಿಲ ಅವರು ತಮ್ಮ ಮನೆಗೆ ಆಹ್ವಾನ ನೀಡಿದರು. ಆದರೆ ಯಾವುದಕ್ಕೂ ಪ್ರತಿಕ್ರಿಯಿಸದೆ ದರ್ಶನ್ ಅಲ್ಲಿಂದ ಹೊರಟು ಹೋಗಿದ್ದಾರೆ. ಇದರಿಂದ ಅವರ ಅಭಿಮಾನಿಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿಗೆ ಕೊಂಚ ನಿರಾಶೆಯಾಯಿತು. (ಏಜೆನ್ಸೀಸ್)