Don't Miss!
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಳ್ಳಾರಿಯಲ್ಲಿ ಯು ಟರ್ನ್ ಹೊಡೆದ ನಟ ಸುದೀಪ್
ತೆಲುಗು, ಹಿಂದಿ, ತಮಿಳು ಇನ್ನಿತರೆ ಭಾಷೆಗಳ ಸಿನಿಮಾಗಳನ್ನು ಪ್ರೋತ್ಸಾಹಿಸಿ ಆದರೆ ಕನ್ನಡ ಚಿತ್ರಗಳನ್ನು ಮಾತ್ರ ಮಿಸ್ ಮಾಡಿಕೊಳ್ಳಬೇಡಿ. ಕನ್ನಡ ಚಿತ್ರಗಳಿಗೆ ಮೊದಲು ಪ್ರಾಧಾನ್ಯತೆ ನೀಡಬೇಕು ಎಂದು ನಟ ಸುದೀಪ್ ತಮ್ಮ ಅಭಿಮಾನಿಗಳನ್ನು ಉದ್ದೇಶಿಸಿ ಬಳ್ಳಾರಿಯಲ್ಲಿ ಹೇಳಿದ್ದಾರೆ.
ಬಳ್ಳಾರಿ ನಟರಾಜ ಚಿತ್ರಮಂದಿರದಲ್ಲಿ ತಮ್ಮ ಲೇಟೆಸ್ಟ್ ಚಿತ್ರ 'ವಿಷ್ಣುವರ್ಧನ' ವೀಕ್ಷಿಸಿದ ಬಳಿಕ ಅವರು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡುತ್ತಿದರು. ರಾಜ್ಯದ ಗಡಿಪ್ರದೇಶದಲ್ಲಿ ಎರಡು ರಾಜ್ಯಗಳ ಪ್ರಜೆಗಳು ಸ್ನೇಹಪೂರ್ವಕವಾಗಿರಬೇಕು. ಪರಭಾಷಾ ಚಿತ್ರಗಳನ್ನು ಪ್ರೋತ್ಸಾಹಿಸಬೇಕು. ಕನ್ನಡ ಭಾಷೆಯನ್ನು ಮಾತ್ರ ಮರೆಯಬಾರದು ಎಂದು ಹಿತನುಡಿದಿದ್ದಾರೆ.
ತಾನು ಖ್ಯಾತ ನಟ ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿ. ಅವರ ಹೆಸರಿನ ಚಿತ್ರದಲ್ಲಿ ಅಭಿನಯಿಸಿರುವುದು ನನ್ನ ಪಾಲಿಗೆ ಬಂದ ಅದೃಷ್ಟ ಎಂದರು. ಈ ಹಿಂದೆಮ್ಮೊ ಸುದೀಪ್ ಬ್ಲಡೀ ಫಕ್ಕರ್ಸ್! ನಾನ್ಯಾಕ್ರಿ ಇನ್ನೊಬ್ರ ಹೆಸರಿಟ್ಟುಕೊಳ್ಳಲಿ! ಎಂದದ್ದನ್ನು ಇಲ್ಲಿ ಧಾರಾಳವಾಗಿ ಸ್ಮರಿಸಬಹುದು. ಬಳಿಕ ಅವರು ಅಲ್ಲಿಂದ ಹೊಸಪೇಟೆಗೆ ಹೊರಟರು. (ಏಜೆನ್ಸೀಸ್)