Don't Miss!
- News ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ ಕೆ ಸುರೇಶ್ ಹೀಗೆ ಹೇಳಿದ್ದು ಯಾರಿಗೆ?
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯೋಗರಾಜ್ ಭಟ್ 'ಡ್ರಾಮಾ'ದಿಂದ ಭಾಮಾ ಔಟ್
ಸದ್ಯದಲ್ಲೇ ಸೆಟ್ಟೇರಲಿರುವ ನಿರ್ದೇಶಕ ಯೋಗರಾಜ್ ಭಟ್ ಅವರ ಹೊಸ ಚಿತ್ರ' ಡ್ರಾಮಾ' ತಂಡದಿಂದ ನಟಿ ಭಾಮಾ ಹೊರಬಂದಿದ್ದಾರೆ. "ಡೇಟ್ಸ್ ಸಮಸ್ಯೆಯಿಂದ ನಾವು ಭಾಮಾ ಅವರನ್ನು ಬದಲಾಯಿಸುತ್ತಿದ್ದೇವೆ" ಎಂಬ ನೇರ ಉತ್ತರ ಭಟ್ಟರ ಕಡೆಯಿಂದ ಬಂದಿದೆ. ಇದರಲ್ಲಿ ಯಾವ 'ಡ್ರಾಮಾ' ನಡೆದಿಲ್ಲವೆಂಬುದು ಭಟ್ಟರ ಮಾತಿನ ಮೂಲಕ ಖಚಿತವಾದಂತಾಗಿದೆ.
ಈ ಹಿಂದೆ ಭಟ್ಟರ ಡ್ರಾಮಾಕ್ಕೆ ಕಳೆದ 18ರಂದು (ಫೆಬ್ರವರಿ 18, 2012) ಮುಹೂರ್ತ ಫಿಕ್ಸ್ ಆಗಿತ್ತು. ಆದರೆ ಅದೇ ದಿನ ಡ್ರಾಮಾ ನಾಯಕ ಯಶ್ ಚಿತ್ರ 'ಲಕ್ಕಿ' ಆಡಿಯೋ ಬಿಡುಗಡೆ ಸಮಾರಂಭ ಆಯೋಜಿಸಲ್ಪಟ್ಟು ಡ್ರಾಮಾ ಮುಹೂರ್ತ ಕೆಲವು ದಿನಗಳು ಮುಂದಕ್ಕೆ ಹೋಗಿದೆ. ಈಗ ಡ್ರಾಮಾ ಚಿತ್ರದಿಂದ ಭಾಮಾ 'ಔಟ್' ಆಗಿರುವ ಹೊಸ ಸುದ್ದಿ ಸೇರ್ಪಡೆಯಾಗಿದೆ.
ಯೋಗರಾಜ್ ಭಟ್ ನಿರ್ದೇಶನದ ಈ ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತವಿದೆ. ಮುಂಗಾರು ಮಳೆ ಕೃಷ್ಣ ಛಾಯಾಗ್ರಹಣ. ಪರಮಾತ್ಮ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಜಯಣ್ಣ ಈ ಚಿತ್ರವನ್ನು ನಿರ್ಮಿಸಲಿದ್ದಾರೆ. ಇದೀಗ ಭಾಮಾ ಜಾಗಕ್ಕೆ ಯಾರು ಬರಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿ ಮೂಡಿದೆ. ಭಟ್ಟರ ಚಿತ್ರಕ್ಕೆ ನಾಯಕಿ ಸಿಗುವುದು ಕಷ್ಟವೇ? (ಒನ್ ಇಂಡಿಯಾ ಕನ್ನಡ)