Don't Miss!
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಶವಂತಪುರ ಮಾರುಕಟ್ಟೆಯಲ್ಲಿ ಮಾಲಾಶ್ರೀ ಶಕ್ತಿ ಫೈಟ್ಸ್
ಐದು ಲಕ್ಷ ಹಣ ಕೊಡಬೇಕಾಗಿರುವ ಹುಡುಗನಿಗೆ ಚಿತ್ರದ ಖಳನಾಯಕ ಮನ ಬಂದಂತೆ ಹೊಡೆಯುತ್ತಿರುತ್ತಾನೆ. ಆ ಸಮಯಕ್ಕೆ ಅಲ್ಲಿಗೆ ಆಗಮಿಸಿದ ನಾಯಕಿ ಖಳನಾಯಕನ ಕುರಿತು ಆ ಹುಡುಗನಿಗೆ ಹೊಡೆಯಬೇಡವೆಂದು ಹೇಳುತ್ತಾಳೆ. ಮಾತು ಕೇಳದ ಖಳನಾಯಕನಿಗೆ ಹಾಗೂ ಚಿತ್ರದ ನಾಯಕಿಗೂ ಹೊಡೆದಾಟವಾಗುತ್ತದೆ.
ಈ ಸನ್ನಿವೇಶವನ್ನು ನಗರದ ಯಶವಂತಪುರ ಮಾರುಕಟ್ಟೆಯಲ್ಲಿ ರಾಮು ಎಂಟರ್ ಪ್ರೈಸಸ್ನ ಮೂವತ್ತೆರಡನೇ ಕಾಣಿಕೆ 'ಶಕ್ತಿ' ಚಿತ್ರಕ್ಕಾಗಿ ನಿರ್ದೇಶಕ ಅನಿಲ್ ಚಿತ್ರಿಸಿಕೊಂಡರು. ಮಾಲಾಶ್ರೀ, ಶಯಾಜಿರಾವ್ ಶಿಂಧೆ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ಸಂಭಾಷಣೆಗಾರರಾಗಿದ್ದ ಅನಿಲ್ ಈ ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆ ಬರೆಯುವುದರೊಂದಿಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ಇದು ಇವರಿಗೆ ಚೊಚ್ಚಲ ಚಿತ್ರ. ಮಾಲಾಶ್ರೀ ಅವರು ವಿಭಿನ್ನ ಪಾತ್ರದಲ್ಲಿ ಅಭಿನಯಿಸುತ್ತಿರುವ ಚಿತ್ರವಿದು.
ಈ ಚಿತ್ರದ ತಾರಾಬಳಗದಲ್ಲಿ ರವಿಶಂಕರ್, ಶಯಾಜಿರಾವ್ ಶಿಂಧೆ, ವಿನಯಾಪ್ರಸಾದ್, ಆಶಾಲತಾ, ಅವಿನಾಶ್, ಶರತ್ ಲೋಹಿತಾಶ್ವಾ, ಸಾಧುಕೋಕಿಲಾ, ಕುರಿಗಳು ಪ್ರತಾಪ್ ಮುಂತಾದವರಿದ್ದಾರೆ. ಥ್ರಿಲ್ಲರ್ಮಂಜು, ರವಿವರ್ಮ, ರಾಮ್ಲಕ್ಷ್ಮಣ್ ಮತ್ತು ಪಳನಿರಾಜ್ ಸಾಹಸ ನಿರ್ದೇಶನ, ಸುಧಾಕರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಲಕ್ಷ್ಮಣ್ ರೆಡ್ಡಿ ಅವರ ಸಂಕಲನವಿದೆ. (ದಟ್ಸ್ಕನ್ನಡ ಸಿನಿವಾರ್ತೆ)