Don't Miss!
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿಕಾರಿ ಕೈತಪ್ಪಿದ್ದಕ್ಕೆ ಶಾನೆ ಬೇಜಾರಾದ ಹರಿಪ್ರಿಯಾ
ತಮಿಳು, ತೆಲುಗು ಚಿತ್ರರಂಗದಲ್ಲಿ ಪುರುಸೋತ್ತಿಲ್ಲದಂತೆ ನಟಿಸುತ್ತಿರುವ ಹರಿಪ್ರಿಯಾ ಶಾನೆ ಬೇಜಾರು ಮಾಡಿಕೊಂಡಿದ್ದಾರೆ. ಮಲಯಾಳಂ ನಟ ಮಮ್ಮೂಟ್ಟಿ ಜೊತೆ 'ಶಿಕಾರಿ' ಚಿತ್ರದಲ್ಲಿ ನಟಿಸುವ ಅವಕಾಶ ಕೈತಪ್ಪಿರುವುದೇ ಈ ಪಶ್ಚಾತ್ತಾಪ ಕಾರಣವಂತೆ.
ಹರಿಪ್ರಿಯಾಗೆ ಡೇಟ್ಸ್ ಸಿಗದ ಕಾರಣ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಅಭಯ ಸಿಂಹ ನಿರ್ದೇಶಿಸುತ್ತಿರುವ 'ಶಿಕಾರಿ'ಯಲ್ಲಿ ನಟಿಸಲು ಸಾಧ್ಯವಾಗುತ್ತಿಲ್ಲವಂತೆ. ಸದ್ಯಕ್ಕೆ ತಮಿಳಿನಲ್ಲಿ ಚೇರನ್ ನಿರ್ದೇಶಿಸುತ್ತಿರುವ ಚಿತ್ರದಲ್ಲಿ ಹರಿಪ್ರಿಯಾ ನಟಿಸುತ್ತಿದ್ದಾರೆ. ಶಿಕಾರಿ ಚಿತ್ರ ಹಾಗೂ ಚೇರನ್ ಚಿತ್ರದ ಡೇಟ್ಸ್ ಸರಿಹೊಂದಾಣಿಕೆಯಾಗಾ ಕಾರಣ ಶಿಕಾರಿಯನ್ನು ಕೈಬಿಡಬೇಕಾಗಿದೆ.
ಅಭಯ ಸಿಂಹ ಅವರ ಸ್ಕ್ರಿಪ್ಟ್ ಇಷ್ಟವಾಗಿತ್ತು. ಮಮ್ಮೂಟ್ಟಿ ಅವರು ಚಿತ್ರದಲ್ಲಿ ಅಭಿನಯಿಸುತ್ತಿರುವುದು ಚಿತ್ರಕ್ಕೆ ಹೊಸ ಕಳೆ ಬಂದಿತ್ತು. ಆದರೆ ಏನು ಮಾಡುವುದು ಶಿಕಾರಿಗೆ ಡೇಟ್ಸ್ ಹೊಂದಾಣಿಕೆಯಾಗುತ್ತಿಲ್ಲ ಎಂದಿದ್ದಾರೆ. ಮುಂದೊಂದು ದಿನವಾದರೂ ಮಮ್ಮುಟ್ಟಿ ಜೊತೆ ನಟಿಸುವ ಅವಕಾಶ ಸಿಗಲಿ ಎಂದು ಹರಿಪ್ರಿಯಾ ಹರಕೆ ಹೊತ್ತಿದ್ದಾರೆ.
ಮಲಯಾಳಂನಲ್ಲಿ ಮಮ್ಮುಟ್ಟಿ ಜೊತೆ ನಟಿಸಬೇಕು ಎಂಬುದು ಹರಿಪ್ರಿಯಾ ಹಂಬಲ. ಸದ್ಯಕ್ಕೆ ಈ ಪ್ರಯತ್ನದಲ್ಲಿರುವ ಹರಿಪ್ರಿಯಾ ಮಲಯಾಳಂ ಚಿತ್ರರಂಗದೊಂದಿಗೆ ಮಾತುಕತೆ ನಡೆಸುತ್ತಿದ್ದಾರಂತೆ. ಏತನ್ಮಧ್ಯೆ ಕನ್ನಡದಲ್ಲಿ ಒಪ್ಪಿಕೊಂಡಿದ್ದ ಶ್ರೀಮುರಳಿ ಜೊತೆಗಿನ 'ನಾನೇ' ಚಿತ್ರದ ಚಿತ್ರೀಕರಣ ಮುಗಿದಿದೆ. ಉಳಿದಂತೆ ಯಾವುದೇ ಹೊಸ ಚಿತ್ರಕ್ಕೆ ಹರಿಪ್ರಿಯಾ ಸಹಿಹಾಕಿಲ್ಲವಂತೆ. ಒಪ್ಪಿಕೊಂಡಿರುವ ಚಿತ್ರಗಳನ್ನು ಮುಗಿಸಿದ ಬಳಿಕವಷ್ಟೆ ಮುಂದಿನ ನಿರ್ಧಾರ ಎನ್ನುತ್ತಾರೆ.